ನವದೆಹಲಿ: ರಷ್ಯಾದ ಭದ್ರತಾ ಮಂಡಳಿಯ ಕಾರ್ಯದರ್ಶಿ ನಿಕೊಲಾಯ್ ಪಟ್ರುಶೆವ್ ಅವರು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದು, ತಮ್ಮ ದೇಶದಲ್ಲಿ ಇತ್ತೀಚಿಗೆ ನಡೆದ ಬಂಡಾಯ ಘಟನೆ ಸೇರಿದಂತೆ ಇತ್ತೀಚಿನ ಬೆಳವಣಿಗೆಗಳ ಕುರಿತು ಮಾತನಾಡಿದರು ಎಂದು ವರದಿಗಳು ತಿಳಿಸಿವೆ.
ಅಲ್ಲದೇ ಉಭಯ ನಾಯಕರು ಇತ್ತೀಚಿ ಬೆಳವಣಿಗೆಗಳು ಮತ್ತು ದ್ವಿಪಕ್ಷೀಯ ಮತ್ತು ಬಹುಪಕ್ಷೀಯ ಸಂಬಂಧಗಳ ಬಗ್ಗೆಯೂ ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ.
ಹೇಳಿಕೆಯ ಪ್ರಕಾರ, ಭದ್ರತಾ ಕ್ಷೇತ್ರದಲ್ಲಿ ರಷ್ಯಾ-ಭಾರತದ ಸಹಕಾರದ ಪ್ರಸ್ತುತ ಸಮಸ್ಯೆಗಳು ಮತ್ತು ದ್ವಿಪಕ್ಷೀಯ ಮತ್ತು ಬಹುಪಕ್ಷೀಯ ಸ್ವರೂಪಗಳ ಚೌಕಟ್ಟಿನೊಳಗೆ ಅವುಗಳ ಆಳವನ್ನು ಹೆಚ್ಚಿಸುವ ನಿರೀಕ್ಷೆಗಳನ್ನು ವಿವರವಾಗಿ ಚರ್ಚಿಸಲಾಗಿದೆ. ಜೊತೆಗೆ, ಪಟ್ರುಶೆವ್ ಅವರು ರಷ್ಯಾದ ಇತ್ತೀಚಿನ ಘಟನೆಗಳ ಬಗ್ಗೆ ದೋವಲ್ ಅವರಿಗೆ ತಿಳಿಸಿದರು ಮತ್ತು ಸಂವಾದಕರು ಗೌಪ್ಯ ಸಂವಾದವನ್ನು ಮುಂದುವರೆಸಲು ಒಪ್ಪಿಕೊಂಡರು ಎಂದು ಹೇಳಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.