ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಪ್ರಯಾಗ್ರಾಜ್ನಲ್ಲಿ ಕೊಲೆಯಾದ ದರೋಡೆಕೋರ ಮತ್ತು ರಾಜಕಾರಣಿ ಅತಿಕ್ ಅಹ್ಮದ್ನಿಂದ ವಶಪಡಿಸಿಕೊಂಡ ಭೂಮಿಯಲ್ಲಿ ಬಡವರಿಗಾಗಿ ನಿರ್ಮಿಸಲಾದ 76 ಫ್ಲ್ಯಾಟ್ಗಳ ಕೀಗಳನ್ನು ಹಸ್ತಾಂತರಿಸಿದರು.
ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) ಅಡಿಯಲ್ಲಿ ನಿರ್ಮಿಸಲಾದ ಫ್ಲ್ಯಾಟ್ಗಳನ್ನು ಜೂನ್ 9 ರಂದು ಲಾಟರಿ ಮೂಲಕ ಹಂಚಿಕೆ ಮಾಡಲಾಗಿದೆ. ಫಲಾನುಭವಿಗಳಿಗೆ ಹಸ್ತಾಂತರಿಸಲಾದ ಫ್ಲ್ಯಾಟ್ಗಳ ಸ್ಥಳದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ಯೋಗಿ ಅವರು ಬಡವರ ಫ್ಲ್ಯಾಟ್ಗಳನ್ನು ಪರಿಶೀಲಿಸಿದರು.
ನಗರದಲ್ಲಿ 226 ಅಭಿವೃದ್ಧಿ ಯೋಜನೆಗಳನ್ನು ಮುಖ್ಯಮಂತ್ರಿ ಉದ್ಘಾಟಿಸಿದರು. 2017ರ ಮೊದಲು ಉತ್ತರಪ್ರದೇಶದಲ್ಲಿ ಮಾಫಿಯಾವು ಬಡವರ, ಉದ್ಯಮಿಗಳ ಅಥವಾ ಸರ್ಕಾರಿ ಸಂಸ್ಥೆಗಳ ಭೂಮಿಯನ್ನು ಕಬಳಿಸುತ್ತಿದ್ದವು, ಬಡವರು ಆಗ ಅಸಹಾಯಕರಾಗಿ ನೋಡುತ್ತಿದ್ದರು. ಈಗ ನಾವು ಅದೇ ಭೂಮಿಯಲ್ಲಿ ಬಡವರಿಗೆ ಮನೆಗಳನ್ನು ನಿರ್ಮಿಸುತ್ತಿದ್ದೇವೆ. ಈ ಮಾಫಿಯಾಗಳಿಂದ ವಶಪಡಿಸಿಕೊಂಡಿರುವ ಭೂಮಿಯಲ್ಲಿ ಫ್ಲ್ಯಾಟ್ ನಿರ್ಮಾಣವಾಗಿದೆ ಇದು ದೊಡ್ಡ ಸಾಧನೆಯಾಗಿದೆ” ಎಂದು ಅವರು ಹೇಳಿದರು.
ಅಧಿಕಾರಿಗಳ ಪ್ರಕಾರ, ಪ್ರತಿ ಫ್ಲಾಟ್ 41 ಚದರ ಮೀಟರ್ ವಿಸ್ತೀರ್ಣವನ್ನು ಹೊಂದಿದೆ ಮತ್ತು ಎರಡು ಕೊಠಡಿಗಳು, ಅಡುಗೆಮನೆ ಮತ್ತು ಶೌಚಾಲಯವನ್ನು ಹೊಂದಿದೆ. ಫ್ಲಾಟ್ಗಳಿಗಾಗಿ 6,000 ಕ್ಕೂ ಹೆಚ್ಚು ಜನರು ಪ್ರಯಾಗ್ರಾಜ್ ಅಭಿವೃದ್ಧಿ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದ್ದರು ಮತ್ತು 1,590 ಜನರು ಹಂಚಿಕೆ ಲಾಟರಿ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರ್ಹರಾಗಿದ್ದಾರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.