ನವದೆಹಲಿ: ಮಣಿಪುರದ ಸಿಎಂ ಎನ್.ಬಿರೇನ್ ಸಿಂಗ್ ಅವರು ಇಂದು ರಾಜೀನಾಮೆ ನೀಡಲಿದ್ದಾರೆ ಎಂದು ಊಹಾಪೋಹಗಳು ಹರಿದಾಡಿದ್ದವು. ಆನ್ಲೈನ್ನಲ್ಲಿ ಹರಿದ ರಾಜೀನಾಮೆ ಪತ್ರಗಳು ಕೂಡ ಹರಿದಾಡಿದ್ದವು. ಆದರೆ ಇದೀಗ ಬಿರೇನ್ ಸಿಂಗ್ ಶುಕ್ರವಾರ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
“ಈ ನಿರ್ಣಾಯಕ ಹಂತದಲ್ಲಿ, ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ” ಎಂದು ಎನ್ ಬಿರೇನ್ ಸಿಂಗ್ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಮುಂಜಾನೆ, ರಾಜೀನಾಮೆ ನೀಡಲು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ ಎಂಬ ಸುದ್ದಿ ಬೆಳಕಿಗೆ ಬಂದ ನಂತರ ಮಣಿಪುರದ ಬೀದಿಗಳಲ್ಲಿ ಪ್ರತಿಭಟನೆಗಳು ನಡೆದವು. ಸಿಎಂ ಸಿಂಗ್ ಅವರನ್ನು ಬೆಂಬಲಿಸಿ ನೂರಾರು ಮಹಿಳೆಯರು ಇಂಫಾಲ್ನಲ್ಲಿ ರಸ್ತೆಗಿಳಿದರು ಮತ್ತು ಅವರ ರಾಜೀನಾಮೆ ವಿರುದ್ಧ ಘೋಷಣೆಗಳನ್ನು ಎತ್ತಿದರು. ಸಿಂಗ್ ಅವರು ರಾಜ್ಯಪಾಲರನ್ನು ಭೇಟಿ ಮಾಡಲು ತಮ್ಮ ನಿವಾಸದಿಂದ ಹೊರಡಲಿರುವಾಗ “ನಾವು ಅವರನ್ನು ರಾಜೀನಾಮೆ ನೀಡಲು ಬಿಡುವುದಿಲ್ಲ” ಎಂದು ಪ್ರತಿಭಟನಾಕಾರರು ಹೇಳಿದರು. ಪ್ರತಿಭಟನೆಯ ದೃಶ್ಯಗಳು ಅಂತರ್ಜಾಲದಲ್ಲಿ ಕಾಣಿಸಿಕೊಂಡಿವೆ.
At this crucial juncture, I wish to clarify that I will not be resigning from the post of Chief Minister.
— N. Biren Singh (@NBirenSingh) June 30, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.