ನವದೆಹಲಿ: ಪ್ರಸ್ತಾವಿತ ಏಕರೂಪ ನಾಗರಿಕ ಸಂಹಿತೆಯು ಸಂವಿಧಾನದ ಸ್ಥಾಪಕರು ಕಲ್ಪಿಸಿದ ನ್ಯಾಯದ ಏಕರೂಪತೆಯನ್ನು ಸಾಧಿಸಲು ಪ್ರಯತ್ನಿಸುತ್ತದೆ ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಇಂದು ಹೇಳಿದ್ದಾರೆ.
ಅಲುವಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಾಜ್ಯಪಾಲರು, ಏಕರೂಪ ನಾಗರಿಕ ಸಂಹಿತೆ ಆಚರಣೆಯ ಏಕರೂಪತೆಯನ್ನು ಸಾಧಿಸುವ ಗುರಿಯನ್ನು ಹೊಂದಿಲ್ಲ ಎಂದಿದ್ದಾರೆ. ಅಲ್ಲದೇ ಅದನ್ನು ಜಾರಿಗೆ ತಂದರೆ, ನಿಕಾಹ್ ಮೂಲಕ ವಿವಾಹಗಳು ನಡೆಯುವುದಿಲ್ಲ ಎಂದು ಜನರನ್ನು ದಾರಿ ತಪ್ಪಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದರು.
ನೆರೆಯ ತಮಿಳುನಾಡಿನಲ್ಲಿನ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ನನಗೆ ಸಂಪೂರ್ಣವಾಗಿ ತಿಳಿದಿಲ್ಲ ಎಂದು ಹೇಳಿದ ಅವರು, ಸಾರ್ವಜನಿಕ ಜೀವನದಲ್ಲಿ ಇರುವವರು ಅನುಮಾನಾಸ್ಪದರಾಗಿರಬಾರದು ಎಂದಿದ್ದಾರೆ.
ರಾಜ್ಯ ವಿಶ್ವವಿದ್ಯಾಲಯಗಳ ಕುಲಪತಿ ಸ್ಥಾನದಿಂದ ರಾಜ್ಯಪಾಲರನ್ನು ತೆಗೆದುಹಾಕುವ ರಾಜ್ಯ ಅಸೆಂಬ್ಲಿ ಅಂಗೀಕರಿಸಿದ ಕೇರಳ ವಿಶ್ವವಿದ್ಯಾನಿಲಯಗಳ ತಿದ್ದುಪಡಿ ಮಸೂದೆಯ ಕುರಿತು ಮಾತನಾಡಿದ ಅವರು, ಈ ವಿಷಯದಲ್ಲಿ ಕಾನೂನು ಅಭಿಪ್ರಾಯವನ್ನು ಕೋರಿದ್ದೇನೆ, ಮುಂದಿನ ನಡೆ ಶೀಘ್ರದಲ್ಲೇ ನಿಮಗೆ ತಿಳಿಯಲಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.