ನವದೆಹಲಿ: ಇಂದು ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಅವರು ನವದೆಹಲಿಯಲ್ಲಿ ವಿಶ್ವಸಂಸ್ಥೆಯ ಉಪ ಪ್ರಧಾನ ಕಾರ್ಯದರ್ಶಿ ಅಮಿನಾ ಜೆ.ಮೊಹಮ್ಮದ್ ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಜಿ20, ಸುಸ್ಥಿರ ಅಭಿವೃದ್ಧಿ ಗುರಿಗಳು (ಎಸ್ಡಿಜಿ) ಸ್ಥಿತಿ ಮತ್ತು ಹವಾಮಾನ ಸವಾಲುಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಿದ್ದೇವೆ ಎಂದು ಜೈಶಂಕರ್ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಉಪ ಪ್ರಧಾನ ಕಾರ್ಯದರ್ಶಿ (ಡಿಎಸ್ಜಿ) ಅಮಿನಾ ಜೆ ಮೊಹಮ್ಮದ್ ಅವರು ಮೂರು ದಿನಗಳ ಭೇಟಿಗಾಗಿ ನಿನ್ನೆ ಭಾರತಕ್ಕೆ ಆಗಮಿಸಿದ್ದಾರೆ. 2022 ರ ಜನವರಿಯಲ್ಲಿ ಎರಡನೇ ಬಾರಿಗೆ ಐದು ವರ್ಷಗಳ ಅವಧಿಗೆ ಯುಎನ್ ಉಪ ಪ್ರಧಾನ ಕಾರ್ಯದರ್ಶಿಯಾಗಿ ಮರು ನೇಮಕಗೊಂಡ ನಂತರ ಇದು ಅವರ ಮೊದಲ ಭಾರತ ಭೇಟಿಯಾಗಿದೆ.
ಅವರ ಭೇಟಿಯ ಸಮಯದಲ್ಲಿ ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದರ್ ಯಾದವ್, ವಿದೇಶಾಂಗ ವ್ಯವಹಾರಗಳ ಮತ್ತು ಸಂಸದೀಯ ವ್ಯವಹಾರಗಳ ಸಚಿವ ವಿ ಮುರಳೀಧರನ್, ನೀತಿ ಆಯೋಗದ ಉಪಾಧ್ಯಕ್ಷ ಸುಮನ್ ಬೆರಿ ಮತ್ತು ಭಾರತದ G20 ಶೆರ್ಪಾ ಅಮಿತಾಭ್ ಕಾಂತ್ ಅವರನ್ನು ಭೇಟಿಯಾಗಲಿದ್ದಾರೆ.
ಉಪ ಪ್ರಧಾನ ಕಾರ್ಯದರ್ಶಿ ಅವರು ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ, ಅಲ್ಲಿ ಅವರು ಪ್ರಮುಖ ಮಾಹಿತಿ ಮತ್ತು ತಂತ್ರಜ್ಞಾನ ಸಂಶೋಧನಾ ಸಂಸ್ಥೆಗಳ ತಜ್ಞರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ವರದಿಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.