ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುಂಚಿತವಾಗಿ ಕೇಂದ್ರ ಸರ್ಕಾರ ಜುಲೈ 19 ರಂದು ಸರ್ಕಾರ ಸರ್ವಪಕ್ಷ ಸಭೆಯನ್ನು ಕರೆದಿದೆ.
ಜುಲೈ 20ರಂದು ಅಧಿವೇಶನ ಆರಂಭವಾಗಲಿದ್ದು, ಆಗಸ್ಟ್ 20ರವರೆಗೆ ಮುಂದುವರೆಯಲಿದೆ. ಆಗಸ್ಟ್ 11ರವರೆಗೆ ಅಧಿವೇಶನ ಹಳೆಯ ಕಟ್ಟಡದಲ್ಲಿ ನಡೆಯಲಿದೆ. ಇದಕ್ಕೂ ಮುನ್ನ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಮಾನ್ಸೂನ್ ಅಧಿವೇಶನದಲ್ಲಿ ಶಾಸಕಾಂಗ ವ್ಯವಹಾರಗಳು ಮತ್ತು ಇತರ ವಿಷಯಗಳ ಬಗ್ಗೆ ಉತ್ಪಾದಕ ಚರ್ಚೆಗಳಿಗೆ ಕೊಡುಗೆ ನೀಡುವಂತೆ ಎಲ್ಲಾ ಪಕ್ಷಗಳನ್ನು ಒತ್ತಾಯಿಸಿದರು.
23 ದಿನಗಳ ಕಾಲ ನಡೆಯುವ ಈ ಅಧಿವೇಶನದಲ್ಲಿ ಒಟ್ಟು 17 ಸಭೆಗಳು ನಡೆಯಲಿವೆ ಎಂದು ಜೋಶಿ ಟ್ವೀಟ್ ಮಾಡಿದ್ದಾರೆ.
ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸಲು ವಿರೋಧ ಪಕ್ಷಗಳು ಕಸರತ್ತು ನಡೆಸುತ್ತಿರುವುದರಿಂದ ಅಧಿವೇಶನ ಬಿರುಸಿನಿಂದ ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ.
ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ ಬಿಲ್ನ ಕರಡನ್ನು ಕೇಂದ್ರವು ಬುಧವಾರ ಅನುಮೋದಿಸಿದೆ, ಇದು ಭಾರತದ ಮೊದಲ ಗೌಪ್ಯತೆ ಕಾನೂನಿಗೆ ಪರಿಣಾಮಕಾರಿಯಾಗಿ ದಾರಿ ಮಾಡಿಕೊಟ್ಟಿದೆ. ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಪ್ರಸ್ತಾವಿತ ಶಾಸನವನ್ನು ಮಂಡಿಸುವ ಸಾಧ್ಯತೆಯಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.