ನವದೆಹಲಿ: ಆದಿಪುರುಷ ಚಿತ್ರದ ಬರಹಗಾರ ಮನೋಜ್ ಮುಂತಾಶಿರ್ ಅವರು ತಮ್ಮ ವಿವಾದಾತ್ಮಕ ಸಂಭಾಷಣೆಗಳ ಮೂಲಕ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಕ್ಕಾಗಿ ಜನರಲ್ಲಿ ಕ್ಷಮೆಯಾಚಿಸಿದ್ದಾರೆ.
ಟ್ವಿಟ್ಟರ್ನಲ್ಲಿ ಮನೋಜ್ ಮುಂತಶಿರ್ ಕ್ಷಮೆಯಾಚನೆ ಮಾಡಿದ್ದು, “ಆದಿಪುರುಷನಿಂದ ಜನರ ಭಾವನೆಗಳಿಗೆ ಘಾಸಿಯಾಗಿದೆ ಎಂದು ನಾನು ಒಪ್ಪಿಕೊಳ್ಳುತ್ತೇನೆ, ನಾನು ನನ್ನ ಬೇಷರತ್ ಕ್ಷಮೆಯನ್ನು ಯಾಚಿಸಿ ಕೈ ಜೋಡಿಸುತ್ತೇನೆ. ಪ್ರಭು ಬಜರಂಗ ಬಲಿ ನಮ್ಮನ್ನು ಒಗ್ಗೂಡಿಸಲಿ ಮತ್ತು ನಮ್ಮ ಪವಿತ್ರ ಸನಾತನ ಮತ್ತು ನಮ್ಮ ಮಹಾನ್ ರಾಷ್ಟ್ರದ ಸೇವೆ ಮಾಡಲು ನಮಗೆ ಶಕ್ತಿಯನ್ನು ನೀಡಲಿ” ಎಂದಿದ್ದಾರೆ.
ಅವರ ಪೋಸ್ಟ್ ನೆಟಿಜನ್ಗಳಿಂದ ಮಿಶ್ರ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದೆ, ಏಕೆಂದರೆ ಕ್ಷಮೆಯಾಚಿಸಲು ಈಗ ತುಂಬಾ ತಡವಾಗಿದೆ ಎಂದು ಹಲವರು ಹೇಳಿದ್ದಾರೆ
“ನೀವು ಕ್ಷಮೆ ಕೇಳಲು ತುಂಬಾ ತಡ ಮಾಡಿದ್ದೀರಿ” ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಕಾಮೆಂಟ್ ಮಾಡಿದ್ದಾರೆ.
ಆದಿಪುರುಷ್ ಸಿನಿಮಾ ಸಂಭಾಷಣೆಗಳು ಭಾರೀ ವಿವಾದವನ್ನು ಸೃಷ್ಟಿ ಮಾಡಿದ್ದು, ಜನರಿಂದ ಖಂಡನೆಗೆ ಒಳಲಾಗಿತ್ತು.
मैं स्वीकार करता हूँ कि फ़िल्म आदिपुरुष से जन भावनायें आहत हुईं हैं.
अपने सभी भाइयों-बहनों, बड़ों, पूज्य साधु-संतों और श्री राम के भक्तों से, मैं हाथ जोड़ कर, बिना शर्त क्षमा माँगता हूँ.
भगवान बजरंग बली हम सब पर कृपा करें, हमें एक और अटूट रहकर अपने पवित्र सनातन और महान देश की…— Manoj Muntashir Shukla (@manojmuntashir) July 8, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.