ಸ್ಯಾನ್ ಫ್ರಾನ್ಸಿಸ್ಕೋ: ಖಲಿಸ್ತಾನ್ ಬೆಂಬಲಿಗರು ಇತ್ತೀಚೆಗೆ ಭಾರತೀಯ ರಾಜತಾಂತ್ರಿಕ ಕಟ್ಟಡಕ್ಕೆ ಬೆಂಕಿ ಹಚ್ಚಲು ಯತ್ನಿಸಿದ ಘಟನೆಯ ಹಿನ್ನೆಲೆಯಲ್ಲಿ ಭಾರತಕ್ಕೆ ಒಗ್ಗಟ್ಟು ವ್ಯಕ್ತಪಡಿಸಲು ಭಾರತೀಯ ರಾಯಭಾರಿ ಕಚೇರಿಯ ಮುಂದೆ ಹಲವಾರು ಭಾರತೀಯ ಅಮೆರಿಕನ್ನರು ಶಾಂತಿ ಸಮಾವೇಶವನ್ನು ನಡೆಸಿದ್ದಾರೆ.
ಖಲಿಸ್ತಾನ್ ಬೆಂಬಲಿಗರು ಜುಲೈ 2 ರಂದು ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಸ್ಯಾನ್ ಫ್ರಾನ್ಸಿಸ್ಕೋದ ಭಾರತೀಯ ದೂತಾವಾಸಕ್ಕೆ ಬೆಂಕಿ ಹಚ್ಚಿದ ಕೃತ್ಯವನ್ನು ತೋರಿಸಲಾಗಿದೆ. ತಿಂಗಳ ಅವಧಿಯಲ್ಲಿ ನಡೆದ ಎರಡನೇ ಹಿಂಸಾಚಾರ ಇದಾಗಿದೆ.
ಈ ಹಿಂಸಾಚಾರದ ವಿರುದ್ಧ ಸ್ಯಾನ್ ಫ್ರಾನ್ಸಿಸ್ಕೋದಲ್ಲಿನ ಭಾರತೀಯ ದೂತಾವಾಸದ ಮುಂದೆ ಶಾಂತಿಯುತ ಸಮಾವೇಶವನ್ನು ಭಾರತೀಯ ಅಮೆರಿಕನ್ನರು ಆಯೋಜಿಸಿ ಖಲಿಸ್ಥಾನ್ ಬೆಂಬಲಿಗರಿಗೆ ಸ್ಪಷ್ಟ ಸಂದೇಶ ರವಾನೆ ಮಾಡಿದ್ದಾರೆ. ಅಲ್ಲದೇ ಭಾರತೀಯರಾಗಿ ತಮ್ಮ ಒಗ್ಗಟ್ಟನ್ನು ಪ್ರದರ್ಶಿಸಿದ್ದಾರೆ.
ಪ್ರತಿಭಟನಾಕಾರರು ಖಲಿಸ್ಥಾನಿಗಳ ಕೃತ್ಯವನ್ನು ಭಯೋತ್ಪಾದನಾ ಕೃತ್ಯ ಎಂದು ಬಣ್ಣಿಸಿದ್ದಾರೆ ಮತ್ತು ಹಿಂಸಾಚಾರಕ್ಕೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಅಮೆರಿಕದಲ್ಲಿರುವ ಭಾರತದ ರಾಯಭಾರಿ ತರಂಜಿತ್ ಸಿಂಗ್ ಸಂಧು ಅವರು ಗುರುವಾರ ಇಲ್ಲಿನ ಕಾನ್ಸುಲೇಟ್ಗೆ ಭೇಟಿ ನೀಡಿ ಭಾರತೀಯ ರಾಜತಾಂತ್ರಿಕರು ಮತ್ತು ಅಧಿಕಾರಿಗಳನ್ನು ಭೇಟಿ ಮಾಡಿ ಅವರಿಗೆ ಧೈರ್ಯ ತುಂಬಿದ್ದಾರೆ.
ಭಾರತವು ತನ್ನ ಪಾಲುದಾರ ರಾಷ್ಟ್ರಗಳಾದ ಕೆನಡಾ, ಯುಕೆ ಮತ್ತು ಯುಎಸ್ ಅನ್ನು “ಉಗ್ರವಾದಿ ಖಲಿಸ್ತಾನಿ ಸಿದ್ಧಾಂತ” ಕ್ಕೆ ಅವಕಾಶ ನೀಡದಂತೆ ಕೇಳಿಕೊಂಡಿದೆ. ಅದು ದ್ವಿಪಕ್ಷೀಯ ಸಂಬಂಧಗಳಿಗೆ ಉತ್ತಮವಲ್ಲಎಂದು ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.