ನವದೆಹಲಿ: 2015-16 ಮತ್ತು 2019-21 ರ ನಡುವೆ ದೇಶದಲ್ಲಿ ಬಹು ಆಯಾಮದ ಬಡತನದಲ್ಲಿ ವಾಸಿಸುವ ವ್ಯಕ್ತಿಗಳ ಸಂಖ್ಯೆಯು 24.85 ಪ್ರತಿಶತದಿಂದ 14.96 ಕ್ಕೆ ಇಳಿದಿದೆ. ಇದು ಇಂದು ನೀತಿ ಆಯೋಗ ಬಿಡುಗಡೆ ಮಾಡಿದ ರಾಷ್ಟ್ರೀಯ ಬಹು ಆಯಾಮದ ಬಡತನ ಸೂಚ್ಯಂಕದಲ್ಲಿ ಬಹಿರಂಗಗೊಂಡಿದೆ.
ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ನೀತಿ ಆಯೋಗದ ಸಿಇಒ ಬಿ.ವಿ.ಆರ್. ಸುಬ್ರಹ್ಮಣ್ಯಂ, ಐದು ವರ್ಷಗಳಲ್ಲಿ 13.5 ಕೋಟಿ ಜನರು ಬಹು ಆಯಾಮದ ಬಡತನದಿಂದ ಪಾರಾಗಿದ್ದಾರೆ. 2030 ರ ವೇಳೆಗೆ ಭಾರತವು ಸುಸ್ಥಿರ ಅಭಿವೃದ್ಧಿ ಗುರಿಗಳ ಗುರಿಯನ್ನು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಸಾಧಿಸುವ ಹಾದಿಯಲ್ಲಿದೆ ಎಂದು ಅವರು ಹೇಳಿದರು.
ಈ ಅವಧಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಬಡತನವು 32.59 ಶೇಕಡಾದಿಂದ 19.28 ಕ್ಕೆ ತೀವ್ರವಾಗಿ ಕುಸಿದಿದೆ ಎಂದು ವರದಿ ತೋರಿಸುತ್ತದೆ ಎಂದು ಅವರು ಹೇಳಿದರು.
ಉತ್ತರ ಪ್ರದೇಶವು ಬಡವರ ಸಂಖ್ಯೆಯಲ್ಲಿ ಅತಿ ಹೆಚ್ಚು ಕುಸಿತವನ್ನು ದಾಖಲಿಸಿದೆ 3.43 ಕೋಟಿ ಜನರು ಬಡತನದಿಂದ ಹೊರ ಬಂದಿದ್ದಾರೆ. ನಂತರದ ಸ್ಥಾನದಲ್ಲಿ ಬಿಹಾರ ಮತ್ತು ಮಧ್ಯಪ್ರದೇಶ ಇದೆ. 36 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಮತ್ತು 707 ಆಡಳಿತಾತ್ಮಕ ಜಿಲ್ಲೆಗಳಿಗೆ ಬಹುಆಯಾಮದ ಬಡತನದ ಅಂದಾಜುಗಳನ್ನು ಒದಗಿಸುವ ವರದಿಯು ಉತ್ತರ ಪ್ರದೇಶ, ಬಿಹಾರ, ಮಧ್ಯಪ್ರದೇಶ, ಒಡಿಶಾ ಮತ್ತು ರಾಜಸ್ಥಾನಗಳಲ್ಲಿ ಬಹುಆಯಾಮದ ಬಡವರ ಅನುಪಾತದಲ್ಲಿ ವೇಗವಾಗಿ ಇಳಿಕೆಯಾಗಿದೆ ಎಂದು ಹೇಳುತ್ತದೆ.
ಪೌಷ್ಟಿಕಾಂಶದ ಸುಧಾರಣೆ, ಶಾಲಾ ಶಿಕ್ಷಣ, ನೈರ್ಮಲ್ಯ ಮತ್ತು ಅಡುಗೆ ಇಂಧನ ಬಡತನವನ್ನು ಕಡಿಮೆ ಮಾಡುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ವರದಿ ಹೇಳುತ್ತದೆ. ರಾಷ್ಟ್ರೀಯ ಬಹುಆಯಾಮದ ಬಡತನ ಸೂಚ್ಯಂಕವು ಆರೋಗ್ಯ, ಶಿಕ್ಷಣ ಮತ್ತು ಜೀವನಮಟ್ಟಗಳ ಆಧಾರದ ಮೇಲೆ ಬಡತನವನ್ನು ವ್ಯಾಖ್ಯಾನಿಸುವ ಸಮಗ್ರ ಮಾಪನವಾಗದೆ ಮತ್ತು ರಾಷ್ಟ್ರೀಯ, ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಬಡತನವನ್ನು ಅಂದಾಜು ಮಾಡುತ್ತದೆ, ರಾಜ್ಯಗಳು ಮತ್ತು ಕೇಂದ್ರಾಡಳಿತಗಳಿಗೆ ಸುಧಾರಣಾ ಯೋಜನೆಗಳನ್ನು ರೂಪಿಸುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.