ಪೂಂಚ್: ಜಮ್ಮು ಮತ್ತು ಕಾಶ್ಮೀರದ ಜಂಟಿ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ನಾಲ್ವರು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಭಾರತೀಯ ಸೇನೆಯ ವಿಶೇಷ ಪಡೆಗಳು, ರಾಷ್ಟ್ರೀಯ ರೈಫಲ್ಸ್ ಮತ್ತು ಜಮ್ಮು-ಕಾಶ್ಮೀರ ಪೊಲೀಸರು ಇತರ ಪಡೆಗಳೊಂದಿಗೆ ಜಂಟಿ ಕಾರ್ಯಾಚರಣೆಯನ್ನು ಪೂಂಚ್ನ ಸಿಂಧರಾ ಪ್ರದೇಶದಲ್ಲಿ ನಡೆಸಿವೆ ಎಂದು ಅವರು ಹೇಳಿದ್ದಾರೆ.
“ನಿನ್ನೆ ರಾತ್ರಿ 11.30 ರ ಸುಮಾರಿಗೆ ಭದ್ರತಾ ಪಡೆಗಳ ಕಾರ್ಯಾಚರಣೆ ನಡೆದಿದ್ದು, ನಂತರ ಇತರ ರಾತ್ರಿ ಕಣ್ಗಾವಲು ಉಪಕರಣಗಳೊಂದಿಗೆ ಡ್ರೋನ್ಗಳನ್ನು ನಿಯೋಜಿಸಲಾಗಿದೆ. ಇಂದು ಮುಂಜಾನೆ, ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಭಾರೀ ಗುಂಡಿನ ಚಕಮಕಿಯೊಂದಿಗೆ ಮತ್ತೆ ಎನ್ಕೌಂಟರ್ ಪ್ರಾರಂಭವಾಯಿತು” ಭಾರತೀಯ ಸೇನೆ ಅಧಿಕಾರಿಗಳು ಹೇಳಿದರು.
ಕಾರ್ಯಾಚರಣೆಯಲ್ಲಿ ಹತರಾದ ಭಯೋತ್ಪಾದಕರು ವಿದೇಶಿ ಭಯೋತ್ಪಾದಕರಾಗಿದ್ದು, ಅವರ ಗುರುತು ಪತ್ತೆ ಹಚ್ಚಲಾಗುತ್ತಿದೆ. ಈ ನಡುವೆ, ದಕ್ಷಿಣ ಕಾಶ್ಮೀರದ ಖೈಮೊಹ್ ಕುಲ್ಗಾಮ್, ಹೆಫ್ ಶೋಪಿಯಾನ್ ಮತ್ತು ಅನಂತನಾಗ್ ಪಟ್ಟಣದಲ್ಲಿ ಭಯೋತ್ಪಾದನಾ ವಿರೋಧಿ ದಾಳಿಗಳು ನಡೆಯುತ್ತಿವೆ. ಬ್ಯಾಂಕ್ ಎಟಿಎಂ ಗಾರ್ಡ್ ಸಂಜಯ್ ಶರ್ಮಾ ಹತ್ಯೆಗೆ ಸಂಬಂಧಿಸಿದಂತೆ ರಾಜ್ಯ ತನಿಖಾ ಸಂಸ್ಥೆ ಈ ದಾಳಿ ನಡೆಸಿದೆ ಎಂದು ವರದಿಗಳು ತಿಳಿಸಿವೆ.
ಅಲ್ಲದೆ, ಜೂನ್ 14 ರಂದು, ತನಿಖಾ ಸಂಸ್ಥೆ ದಕ್ಷಿಣ ಕಾಶ್ಮೀರದ ಅನೇಕ ಸ್ಥಳಗಳಲ್ಲಿ ದಾಳಿ ನಡೆಸಿತು. ಫೆಬ್ರವರಿಯಲ್ಲಿ, ಸಂಜಯ್ ಶರ್ಮಾ ಎಂಬ ಬ್ಯಾಂಕ್ ಎಟಿಎಂ ಸಿಬ್ಬಂದಿ ಸ್ಥಳೀಯ ಮಾರುಕಟ್ಟೆಗೆ ತೆರಳುತ್ತಿದ್ದಾಗ ಭಯೋತ್ಪಾದಕರು ಗುಂಡು ಹಾರಿಸಿದ್ದರು. ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.