ಲಕ್ನೋ: 35 ಕೋಟಿ ಸಸಿಗಳನ್ನು ನೆಡುವ ಗುರಿಯೊಂದಿಗೆ ಉತ್ತರಪ್ರದೇಶದಲ್ಲಿ ಮೆಗಾ ಪ್ಲಾಂಟೇಶನ್ ಡ್ರೈವ್ ಇಂದು ಪ್ರಾರಂಭವಾಯಿತು. ಅದರಲ್ಲಿ 30 ಕೋಟಿ ಸಸಿಗಳನ್ನು ಇಂದು ನೆಡಲಾಗುತ್ತದೆ. ಸ್ವಾತಂತ್ರ್ಯ ದಿನಾಚರಣೆಯಂದು ಆಗಸ್ಟ್ 15 ರೊಳಗೆ ಐದು ಕೋಟಿ ಸಸಿಗಳನ್ನು ನೆಡಲಾಗುತ್ತಿದೆ. ರಾಜ್ಯದಲ್ಲಿ ಈ ವರ್ಷ 35 ಕೋಟಿ ಸಸಿ ನೆಡುವ ಗುರಿ ಹೊಂದಲಾಗಿದೆ.
ವರದಿಗಳ ಪ್ರಕಾರ, ಈ ವರ್ಷದ ಪ್ಲಾಂಟೇಶನ್ ಅಭಿಯಾನದ ಥೀಮ್ ‘ಪೆಡ್ ಲಗಾವೋ ಪೆಡ್ ಬಚಾವೋ’ ಅಂದರೆ ‘ಮರಗಳನ್ನು ನೆಡಿ, ಮರಗಳನ್ನು ಉಳಿಸಿ’. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಿಜನೂರಿನ ವಿದುರ್ ಕುಟಿ ಆಶ್ರಮದಲ್ಲಿ ಸಸಿ ನೆಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ ರಾಜ್ಯದ ಪ್ರತಿಯೊಬ್ಬ ನಾಗರಿಕರು ಈ ಅಭಿಯಾನದಲ್ಲಿ ಭಾಗವಹಿಸಿ ತಮ್ಮ ಸ್ಥಳದಲ್ಲಿ ಕನಿಷ್ಠ ಒಂದು ಸಸಿಯನ್ನು ನೆಡುವಂತೆ ಮನವಿ ಮಾಡಿದ್ದಾರೆ.
ಈ ಅಭಿಯಾನದಲ್ಲಿ ಪಾಲ್ಗೊಳ್ಳಲು ರಾಜ್ಯಪಾಲ ಆನಂದಿಬೆನ್ ಪಟೇಲ್ ಮಥುರಾದಲ್ಲಿದ್ದಾರೆ ಮತ್ತು ಇತರ ಸಚಿವರುಗಳು ವಿವಿಧ ಜಿಲ್ಲೆಗಳಲ್ಲಿ ಈ ಮೆಗಾ ಪ್ಲಾಂಟೇಶನ್ ಡ್ರೈವ್ನಲ್ಲಿ ಭಾಗವಹಿಸುತ್ತಿದ್ದಾರೆ. ರಾಜ್ಯವು ಈ ವರ್ಷ ಅಭಿಯಾನವನ್ನು ಇಂದಿನಿಂದ ಎರಡು ಭಾಗಗಳಾಗಿ ವಿಂಗಡಿಸಿದ್ದು, ಒಟ್ಟು 30 ಕೋಟಿ ಸಸಿಗಳನ್ನು ಇಂದು ನೆಡಲಾಗುತ್ತದೆ. ಆಗಸ್ಟ್ 15 ರಂದು ಇನ್ನೂ ಐದು ಕೋಟಿ ಸಸಿಗಳನ್ನು ನೆಡಲಾಗುವುತ್ತಿದೆ.
ಈ ಅಭಿಯಾನಕ್ಕಾಗಿ ವಿವಿಧ ಸಚಿವಾಲಯಗಳಿಗೆ ಗುರಿಗಳನ್ನು ನೀಡಲಾಗಿದೆ ಮತ್ತು 30 ಕೋಟಿ ಸಸಿಗಳನ್ನು ನೆಡುವ ಗುರಿಯನ್ನು ಸಾಧಿಸಲು ಇಡೀ ರಾಜ್ಯ ಯಂತ್ರವು ಒಟ್ಟಾಗಿ ಕೆಲಸ ಮಾಡುತ್ತದೆ. ಕಳೆದ ವರ್ಷ ರಾಜ್ಯವು 35 ಕೋಟಿ ಸಸಿಗಳನ್ನು ನೆಟ್ಟು ದಾಖಲೆ ಮಾಡಿದ್ದು, ಈ ವರ್ಷವೂ ಅದೇ ಗುರಿ ನಿಗದಿಪಡಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.