ವಿದ್ಯಾಗಿರಿ: ಮಣಿಪುರದಲ್ಲಿ ಸಂಘರ್ಷದಲ್ಲಿ ನೊಂದ ಕುಟುಂಬಗಳಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನೆರವು ನೀಡಲಾಗಿದೆ.
ಕಾಲೇಜಿನಲ್ಲಿ ನಡೆದ ಟ್ರೆಡಿಷನಲ್ ಡೇ ಸಂದರ್ಭದಲ್ಲಿ ಸಂಗ್ರಹಿಸಿದ ಸುಮಾರು 1 ಲಕ್ಷ ರೂಪಾಯಿಯನ್ನು ವಿವಿಧ ಪರಿಹಾರ ಶಿಬಿರಗಳಿಗೆ ಮತ್ತು ರಾಜ್ಯದ ಬಿಸ್ನುಪುರ್ ಜಿಲ್ಲೆ (ಮೊಯಿರಾಂಗ್ ನ್ಯಾಯವ್ಯಾಪ್ತಿಯಲ್ಲಿರುವ ಕುಂಬಿ ಪ್ರದೇಶ), ತೌಬಲ್ ಜಿಲ್ಲೆ ಮತ್ತು ಕಾಕ್ಚಿಂಗ್ ಜಿಲ್ಲೆಯ ಹಾಲಿ ಗ್ರಾಮಗಳಿಗೆ ವಿತರಿಸಿದರು.
7 ಪರಿಹಾರ ಶಿಬಿರಗಳಿಗೆ ತಲಾ 10 ಸಾವಿರ ರೂಪಾಯಿ, 2 ಮುಂಚೂಣಿ ಗ್ರಾಮ ರಕ್ಷಣಾ ಸಂಸ್ಥೆಗೆ ತಲಾ 10 ಸಾವಿರ ರೂಪಾಯಿ ಮತ್ತು 3 ಸ್ಥಳಗಳಿಗೆ ಆಲೂಗಡ್ಡೆ, ಸಕ್ಕರೆ, ಅಡುಗೆ ಎಣ್ಣೆ, ಟೂತ್ ಬ್ರಷ್, ಮಸೂರ, ನೀರಿನ ಬಾಟಲಿ ಇತ್ಯಾದಿ ಪರಿಹಾರ ಸಾಮಗ್ರಿಗಳನ್ನು ವಿತರಿಸಿದರು.
ಮಿಜಾರಿನ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಜರುಗಿದ ಆಳ್ವಾಸ್ ಟ್ರೆಡಿಷನಲ್ ಡೇ ಸಂಧರ್ಭದಲ್ಲಿ ಹತ್ತಕ್ಕೂ ಅಧಿಕ ಆಹಾರ ಮಳಿಗೆಗಳನ್ನು ವಿದ್ಯಾರ್ಥಿಗಳು ತೆರೆದಿದ್ದರು. ಆ ಸಂಧರ್ಭದಲ್ಲಿ ವಿವಿಧ ಮಳಿಗೆಗಳಿಂದ ಗಳಿಸಿದ ಲಾಭವನ್ನು ಒಟ್ಟು ಗೂಡಿಸಿ ಮಣಿಪುರ ಸಂತ್ರಸ್ತರಿಗೆ ಸಹಾಯಧನದ ರೂಪದಲ್ಲಿ ನೀಡಲಾಗಿದೆ.
ಉದಾತ್ತ ಸಹಾಯಕ್ಕಾಗಿ ಆಳ್ವಾಸ್ ಕಾಲೇಜು ಮತ್ತು ಕಾಲೇಜಿನ ವಿದ್ಯಾರ್ಥಿಗಳಿಗೆ ನಾನು ಅಭಾರಿಯಾಗಿದ್ದೇನೆ ಎಂದು ಮಣಿಪುರದ ಅಜಂತಾ ಮೊಯಿರಾಂಗ್ತೆಂ ಹೇಳಿದ್ದಾರೆ.
ತೆಂತಾ ಖೋಂಗ್ಬಾಲ್ ವೆಲ್ಫೇರ್ ಅಸೋಸಿಯೇಷನ್ ಯುವ ಸ್ವಯಂಸೇವಾ ಸಂಸ್ಥೆಯ ಸ್ವಯಂಸೇವಕರು ವಿತರಣೆ ಮಾತನಾಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.