ನವದೆಹಲಿ: ಮಣಿಪುರ ವಿಷಯಕ್ಕೆ ಸಂಬಂಧಿಸಿದಂತೆ ಸಂಸತ್ತಿನ ಕಲಾಪಕ್ಕೆ ಪ್ರತಿಪಕ್ಷಗಳು ಅಡ್ಡಿಪಡಿಸುತ್ತಿರುವ ನಡುವೆ, ಬಿಜೆಪಿಯ ಹಿರಿಯ ನಾಯಕರು ಸೋಮವಾರ ಮಣಿಪುರ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲು ಸಭೆ ನಡೆಸಿದ್ದಾರೆ.
ವರದಿಗಳ ಪ್ರಕಾರ, ಆಡಳಿತ ಪಕ್ಷದ ನಾಯಕತ್ವವು ಸಂಸತ್ ಭವನದಲ್ಲಿ ಸರಣಿ ಸಭೆಗಳನ್ನು ನಡೆಸಿದೆ. ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ನೇತೃತ್ವದಲ್ಲಿ ಸಭೆಗಳು ನಡೆದಿವೆ. ನಂತರ ಸಂಸತ್ತಿನ ಭವನದೊಳಗಿನ ಪ್ರಧಾನಿ ಕಚೇರಿಯಲ್ಲಿ ಮೋದಿ ಜೊತೆಯೂ ಸಂಸದರು ಸಭೆ ನಡೆಸಿದ್ದಾರೆ. ನಂತರ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಸಂಸತ್ ಭವನದಲ್ಲಿ ಶಾ ಅವರನ್ನು ಭೇಟಿಯಾದರು.
ಮಣಿಪುರದಲ್ಲಿ ಬಿಜೆಪಿ ಕೆಲವು ರಾಜಕೀಯ ಹೆಜ್ಜೆಗಳನ್ನು ಇಡಲು ಪರಿಗಣಿಸಬಹುದು ಎಂಬ ಸುಳಿವನ್ನು ಈ ಸಭೆಗಳು ಹುಟ್ಟು ಹಾಕಿವೆ. ರಾಜ್ಯ ಸಮುದಾಯದ ಅತ್ಯುನ್ನತ ಬುಡಕಟ್ಟು ಸಂಘಟನೆ ಕುಕಿ ಇನ್ಪಿ ಮಣಿಪುರ (KIM) ಸಂವಿಧಾನದ 3 ನೇ ವಿಧಿಯ ಅಡಿಯಲ್ಲಿ ಪ್ರತ್ಯೇಕ ರಾಜ್ಯಕ್ಕಾಗಿ ಬೇಡಿಕೆ ಇಟ್ಟಿದ್ದನ್ನು ಕೇಂದ್ರ ಗಂಭೀರವಾಗಿ ಪರಿಗಣಿಸಿದೆ ಎನ್ನಲಾಗಿದೆ.
ವಿಶೇಷವಾಗಿ ಇತ್ತೀಚಿನ ಹಿಂಸಾಚಾರದ ಹಿನ್ನೆಲೆಯಲ್ಲಿ ಸರ್ಕಾರವು ಕುಕಿ ಗುಂಪುಗಳು ವ್ಯಕ್ತಪಡಿಸಿದ ಕಳವಳಗಳಿಗೆ ಸಹಾನುಭೂತಿ ಹೊಂದಿದ್ದರೂ, ಬಹುಸಂಖ್ಯಾತ ಮೈಟೈ ಗುಂಪುಗಳನ್ನು ವಿರೋಧಿಸುವ ಅಥವಾ ಪ್ರಚೋದಿಸುವ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಲು ಬಯಸುವುದಿಲ್ಲ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.