ಬೆಂಗಳೂರು: ಕೆಲವು ವರ್ಷಗಳ ಹಿಂದೆ ರಾಜ್ಯವನ್ನೇ ತಲ್ಲಣಗೊಳಿಸಿದ್ದ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ, ಶಿವಮೊಗ್ಗ ಮತ್ತು ಹಬ್ಬಳ್ಳಿ ಸೇರಿದಂತೆ ಇತರೆಡೆ ನಡೆದ ಪ್ರತಿಭಟನೆ ಮತ್ತು ಗಲಭೆ ಪ್ರಕರಣಗಳ ಆರೋಪಿಗಳಿಗೆ ಕ್ಲೀನ್ ಚಿಟ್ ನೀಡುವ ತಯಾರಿಗಳನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ.
ಅಮಾಯಕ ಯುವಕರು ಮತ್ತು ವಿದ್ಯಾರ್ಥಿಗಳ ಮೇಲಿನ ಸುಳ್ಳು ಪ್ರಕರಣಗಳನ್ನು ಹಿಂಪಡೆಯುವಂತೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮನವಿಯನ್ನು ಪರಿಶೀಲಿಸುವಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.
ಈ ಕುರಿತು ಪ್ರತಿಪಕ್ಷ ಬಿಜೆಪಿ ಕಟುವಾಗಿ ಪ್ರತಿಕ್ರಿಯಿಸಿದ್ದು, ರಾಜ್ಯದ ಕಾಂಗ್ರೆಸ್ ಸರ್ಕಾರವು ‘ಒಂದು ಸಮುದಾಯದ ಕೋಮು ಅಪರಾಧಿಗಳಿಗೆ ಕ್ಲೀನ್ ಚಿಟ್ ನೀಡುವ ಮೂಲಕ, ಜಿಹಾದಿಗಳು ಮತ್ತು ಪಿಎಫ್ಐ ಭಯೋತ್ಪಾದಕರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ’ ಎಂದು ಆರೋಪಿಸಿದೆ. ಸಚಿವ ಪರಮೇಶ್ವರ ಅವರು ಜುಲೈ 19ರಂದು ಪ್ರಧಾನ ಕಾರ್ಯದರ್ಶಿ ಕಾರಾಗೃಹಗಳು, ನಾಗರಿಕ ರಕ್ಷಣೆ ಮತ್ತು ಸಹಾಯಕ ಸೇವೆಗಳು (ಪಿಸಿಎಎಸ್), ಗೃಹ ಇಲಾಖೆಗೆ ಬರೆದ ಪತ್ರದಲ್ಲಿ ಶಾಸಕ ಮತ್ತು ಮಾಜಿ ಸಚಿವ ತನ್ವೀರ್ ಸೇಠ್ ಅವರ ಮನವಿ ಪತ್ರವನ್ನು ಉಲ್ಲೇಖಿಸಿದ್ದಾರೆ.
‘ಒಂದು’ ಕೋಮಿನ ಕಮ್ಯುನಲ್ ಅಪರಾಧಿಗಳಿಗೆ ನಮ್ಮಲ್ಲಿ ಕ್ಲೀನ್ ಚಿಟ್ ನೀಡಲಾಗುವುದು ಎಂದು ಬೋರ್ಡ್ ಹಾಕಿಕೊಂಡು @DrParameshwara ರವರು ಕಾರ್ಯನಿರ್ವಹಿಸುತ್ತಿರುವಂತಿದೆ!
ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಬೇರೊಂದಿದೆಯೇ?
ಈ ಸರಕಾರ ಜಿಹಾದಿಗಳ, ಪಿಎಫ್ಐ ಭಯೋತ್ಪಾದಕರ ತಾಳಕ್ಕೆ ಕುಣಿಯುತ್ತಿರುವುದು ಈ ಪತ್ರ ಋುಜುವಾತು ಪಡಿಸುತ್ತಿದೆ.… pic.twitter.com/FVjeoIbMys
— BJP Karnataka (@BJP4Karnataka) July 26, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.