ನವದೆಹಲಿ: 1984 ರ ಸಿಖ್ ವಿರೋಧಿ ದಂಗೆಯ ಸಂದರ್ಭದಲ್ಲಿ ನಡೆದ ಪುಲ್ ಬಂಗಾಶ್ ಹತ್ಯೆಗಳಿಗೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಇಂದು ಆಗಸ್ಟ್ 5 ರಂದು ಹಾಜರಾಗುವಂತೆ ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ ಅವರಿಗೆ ಸಮನ್ಸ್ ನೀಡಿದೆ.
ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ವಿಧಿ ಗುಪ್ತಾ ಆನಂದ್ ಅವರು ಪ್ರಕರಣದ ಚಾರ್ಜ್ ಶೀಟ್ ಅನ್ನು ಸ್ವೀಕರಿಸಿದ ನಂತರ ಈ ಆದೇಶವನ್ನು ನೀಡಿದರು.
ಪ್ರಕರಣದಲ್ಲಿ ಜಗದೀಶ್ ಟೈಟ್ಲರ್ ವಿರುದ್ಧ ಸಿಬಿಐ ಮೇ 20 ರಂದು ಚಾರ್ಜ್ ಶೀಟ್ ಸಲ್ಲಿಸಿತ್ತು.
ನವೆಂಬರ್ 1, 1984 ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಅವರ ಸಿಖ್ ಅಂಗರಕ್ಷಕರು ಹತ್ಯೆ ಮಾಡಿದ ಒಂದು ದಿನದ ನಂತರ ಮೂರು ಜನರನ್ನು ಕೊಂದು ಗುರುದ್ವಾರವನ್ನು ಸುಟ್ಟು ಹಾಕಿದ ಪ್ರಕರಣ ಇದಾಗಿದೆ.
ನವೆಂಬರ್ 1, 1984 ರಂದು ಆಜಾದ್ ಮಾರ್ಕೆಟ್ನ ಪುಲ್ ಬಂಗಾಶ್ ಗುರುದ್ವಾರದಲ್ಲಿ ಜಮಾಯಿಸಿದ ಜನಸಮೂಹವನ್ನು ಟೈಟ್ಲರ್ ಪ್ರಚೋದಿಸಿದರು. ಪ್ರಚೋದನೆಯ ಪರಿಣಾಮವಾಗಿ ಗುರುದ್ವಾರವನ್ನು ಸುಟ್ಟುಹಾಕಲಾಯಿತು ಮತ್ತು ಮೂವರು ಸಿಖ್ಖರಾದ ಠಾಕೂರ್ ಸಿಂಗ್ ಮತ್ತು ಗುರು ಚರಣ್ ಸಿಂಗ್, ಬಾದಲ್ ಸಿಂಗ್ ಅವರನ್ನು ಕೊಂದು ಹಾಕಲಾಯಿತು ಎಂದು ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಜ್ ಶೀಟ್ನಲ್ಲಿ ಸಿಬಿಐ ಹೇಳಿದೆ.
ಟೈಟ್ಲರ್ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) 302 (ಕೊಲೆ) ಸೆಕ್ಷನ್ 147 (ಗಲಭೆ), 109 (ಪ್ರಚೋದನೆ) ಅಡಿಯಲ್ಲಿ ಆರೋಪಗಳನ್ನು ಹೊರಿಸಲಾಗಿದೆ ಎಂದು ಸಿಬಿಐ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.