ನವದೆಹಲಿ: ಭಾರತವಕ್ಕೆ ತನ್ನ ಜಿ 20 ಅಧ್ಯಕ್ಷತೆಯಲ್ಲಿ ಮಾನವೀಯತೆ ಎದುರಿಸುತ್ತಿರುವ ಅತ್ಯಂತ ಪ್ರಮುಖ ಸವಾಲುಗಳ ಮೇಲೆ ಗಮನ ಕೇಂದ್ರೀಕರಿಸಲು ಸಾಧ್ಯವಾಯಿತು ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ ಹೇಳಿದ್ದಾರೆ.
ಹವಾಮಾನ ಸ್ನೇಹಿ ಜೀವನಶೈಲಿಯನ್ನು ಸಶಕ್ತಗೊಳಿಸಲು, ಆಹಾರ ಭದ್ರತೆಯ ಸವಾಲನ್ನು ಎದುರಿಸಲು ಸಿರಿಧಾನ್ಯವನ್ನು ಜನಪ್ರಿಯಗೊಳಿಸಲು ಮತ್ತು ಜನರ ಜೀವನವನ್ನು ಪರಿವರ್ತಿಸಲು ತಂತ್ರಜ್ಞಾನದ ಬಳಕೆಗಾಗಿ ಮಿಷನ್ ಲೈಫ್ಗೆ ಒತ್ತು ನೀಡಲಾಗಿದೆ ಎಂದು ಅವರು ಹೇಳಿದರು.
ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೇ ಸಚಿವರು ಇಂದು ರಾಜ್ಯಸಭೆಯಲ್ಲಿ ಭಾರತದ ವಿದೇಶಾಂಗ ನೀತಿಯ ಇತ್ತೀಚಿನ ಬೆಳವಣಿಗೆಗಳ ಕುರಿತು ಹೇಳಿಕೆ ನೀಡಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಇತ್ತೀಚಿನ ಯುಎಸ್ ಭೇಟಿಯಲ್ಲಿ ಮಾಡಿದ ಸಾಧನೆಗಳನ್ನು ಎತ್ತಿ ಹಿಡಿದ ಡಾ. ಜೈಶಂಕರ್, ಎರಡೂ ದೇಶಗಳು ರಕ್ಷಣೆ, ತಂತ್ರಜ್ಞಾನ, ಬಾಹ್ಯಾಕಾಶ ಮತ್ತು ಆರ್ಥಿಕ ವಲಯದಲ್ಲಿ ತಮ್ಮ ಸಂಬಂಧವನ್ನು ಹೆಚ್ಚಿಸಲು ಹಲವಾರು ಒಪ್ಪಂದಗಳನ್ನು ಮಾಡಿಕೊಂಡಿವೆ. ವಿಶೇಷವಾಗಿ ಕೃತಕ ಬುದ್ಧಿಮತ್ತೆ, ಸೆಮಿಕಂಡಕ್ಟರ್ಗಳು, ಬಾಹ್ಯಾಕಾಶ, ಕ್ವಾಂಟಮ್ ಮತ್ತು ಟೆಲಿಕಾಂಗಳ ಮೇಲೆ ಕೇಂದ್ರೀಕರಿಸುವ ಕ್ರಿಟಿಕಲ್ ಮತ್ತು ಎಮರ್ಜಿಂಗ್ ಟೆಕ್ನಾಲಜೀಸ್ ಉಪಕ್ರಮದ ಮೂಲಕ ತಂತ್ರಜ್ಞಾನದ ಸಹಕಾರವನ್ನು ಹೆಚ್ಚಿಸಲು ಎರಡೂ ಕಡೆಯವರು ಒಪ್ಪಿಕೊಂಡಿದ್ದಾರೆ ಎಂದು ಅವರು ಹೇಳಿದರು.
ರಕ್ಷಣಾ ಕೈಗಾರಿಕಾ ಸಹಕಾರ ಮಾರ್ಗಸೂಚಿಯ ಅಡಿಯಲ್ಲಿ, ಎರಡೂ ದೇಶಗಳ ರಕ್ಷಣಾ ಕೈಗಾರಿಕೆಗಳು ಮತ್ತು ಸ್ಟಾರ್ಟ್ಅಪ್ಗಳು ಸಹ-ಉತ್ಪಾದನೆ ಮತ್ತು ಇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಉದ್ದೇಶವನ್ನು ಪ್ರಕಟಿಸಿವೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.