ನವದೆಹಲಿ: ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಬಾಹ್ಯಾಕಾಶ ವಿಜ್ಞಾನದಲ್ಲಿ ಭಾರತೀಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳು ಲಭ್ಯವಾಗಿವೆ ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ.
ತಮಿಳುನಾಡಿನ ರಾಮನಾಥಪುರಂ ಜಿಲ್ಲೆಗೆ ಎರಡು ದಿನಗಳ ಭೇಟಿ ನೀಡಿದ ಅವರು, ಕಲಾಂ ಅವರ ಜೀವನ ಮತ್ತು ಪರಂಪರೆಗೆ ಗೌರವ ನೀಡುವ ‘ಮೆಮೊರೀಸ್ ನೆವರ್ ಡೈ’ ಪುಸ್ತಕವನ್ನು ಅನಾವರಣಗೊಳಿಸಿದರು. ಈ ಪುಸ್ತಕವನ್ನು ಡಾ.ಎ.ಪಿ.ಜೆ.ಎಂ.ನಾಸಿಮಾ ಮರೈಕಾಯರ್ ಮತ್ತು ವಿಜ್ಞಾನಿ ಡಾ.ವೈ.ಎಸ್.ರಾಜನ್ ಬರೆದಿದ್ದಾರೆ.
ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಶಾ, ದಿವಂಗತ ಡಾ. ಎಪಿಜೆ ಅಬ್ದುಲ್ ಕಲಾಂ ಅವರು ಕಲ್ಪಿಸಿದ್ದ ಬಾಹ್ಯಾಕಾಶ ವಿಜ್ಞಾನದ ಕನಸು ಪ್ರಧಾನಿ ಮೋದಿಯವರ ಹೊಸ ಆವಿಷ್ಕಾರಗಳ ಮೂಲಕ ನನಸಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ಜಗತ್ತನ್ನು ಮುನ್ನಡೆಸುವ ಭಾರತದ ಸಾಮರ್ಥ್ಯವನ್ನು ಅವರು ಒತ್ತಿ ಹೇಳಿದರು.
ಡಾ.ಕಲಾಂ ಅವರ ರಾಷ್ಟ್ರ ಭಕ್ತಿ ಅನುಕರಣೀಯ ಎಂದು ಶಾ ಹೇಳಿದರು.ವಿಜ್ಞಾನ, ತಂತ್ರಜ್ಞಾನ ಮತ್ತು ಶಿಕ್ಷಣಕ್ಕೆ ಕಲಾಂ ಕೊಡುಗೆ ಅಪಾರವಾಗಿದೆ ಮತ್ತು ಭಾರತದ ಬಾಹ್ಯಾಕಾಶ ಕಾರ್ಯಕ್ರಮಗಳಲ್ಲಿ ಅವರು ನಿರ್ಣಾಯಕ ಪಾತ್ರವನ್ನು ವಹಿಸಿದರು ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.