ನವದಹಲಿ: ಬಲೂಚಿಸ್ತಾನದ ದೇಶಭ್ರಷ್ಟ ಸರ್ಕಾರದ ಪ್ರಧಾನಿ ನೇಲಾ ಕ್ವಾದ್ರಿ ಅವರು ಪಾಕಿಸ್ತಾನದ ಅಕ್ರಮ ಆಕ್ರಮಣದಿಂದ ಸ್ವಾತಂತ್ರ್ಯ ಪಡೆಯಲು ವಿಶ್ವಸಂಸ್ಥೆಯಲ್ಲಿ ಬೆಂಬಲಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಕೋರಿದ್ದಾರೆ.
“ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಸರ್ಕಾರವು ವಿಶ್ವಸಂಸ್ಥೆಯಲ್ಲಿ ಬಲೂಚಿಸ್ತಾನವನ್ನು ಬೆಂಬಲಿಸಲು ಇಂದು ಅವಕಾಶವಿದೆ, ಅದು ಅವರಿಗೆ ನಾಳೆ ಇಲ್ಲದಿರಬಹುದು” ಎಂದು ಶುಕ್ರವಾರ ಉತ್ತರಾಖಂಡದಲ್ಲಿ ಗಂಗಾನದಿಯ ವಿಐಪಿ ಘಾಟ್ನಲ್ಲಿ ಪೂಜೆ ಸಲ್ಲಿಸಿದ ನಂತರ ಕ್ವಾದ್ರಿ ಸುದ್ದಿಗಾರರಿಗೆ ತಿಳಿಸಿದರು. ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಅವರು ಇಲ್ಲಿ ಪ್ರಾರ್ಥಿಸಿದರು.
“ಒಂದು ಕಾಲದಲ್ಲಿ ಸ್ವತಂತ್ರ ರಾಷ್ಟ್ರವಾಗಿದ್ದ ಬಲೂಚಿಸ್ತಾನವು ಪಾಕಿಸ್ತಾನದ ಅಕ್ರಮ ವಶದಲ್ಲಿದ್ದು, ಅದರ ಖನಿಜ ಸಂಪತ್ತನ್ನು ಲೂಟಿ ಮಾಡುತ್ತಿದೆ ಮತ್ತು ಅಲ್ಲಿನ ಜನರನ್ನು ಎಲ್ಲಾ ರೀತಿಯ ದೌರ್ಜನ್ಯಗಳಿಗೆ ಒಳಪಡಿಸುತ್ತಿದೆ. ಬಲೂಚ್ ಹುಡುಗಿಯರ ಮೇಲೆ ಅತ್ಯಾಚಾರ ನಡೆಯುತ್ತಿದೆ, ಮನೆ ಮತ್ತು ತೋಟಗಳಿಗೆ ಬೆಂಕಿ ಹಚ್ಚಲಾಗುತ್ತಿದೆ” ಎಂದಿದ್ದಾರೆ.
ಬಲೂಚಿಸ್ತಾನದ ದೇಶಭ್ರಷ್ಟ ಪ್ರಧಾನಿ ನೇಲಾ ಕ್ವಾದ್ರಿ ಅವರು ಪಾಕಿಸ್ತಾನದಿಂದ ಸ್ವಾತಂತ್ರ್ಯಕ್ಕಾಗಿ ವಿಶ್ವಸಂಸ್ಥೆಯಲ್ಲಿ ಭಾರತದ ಬೆಂಬಲವನ್ನು ಕೋರಿದ್ದಾರೆ. ಇಂದು ಭಾರತ ನಮ್ಮನ್ನು ಬೆಂಬಲಿಸಿದರೆ ನಾಳೆ ಸ್ವತಂತ್ರವಾದ ಬಳಿಕ ಬಲೂಚ್ ಭಾರತವನ್ನು ಬೆಂಬಲಿಸುತ್ತದೆ ಎಂದಿದ್ದಾರೆ.
ಬಲೂಚಿಸ್ಥಾನದ ಸ್ವಾತಂತ್ರ್ಯಕ್ಕೆ ಬೆಂಬಲವನ್ನು ಪಡೆಯಲು ಅವರು ಪ್ರಸ್ತುತ ವಿಶ್ವ ಪ್ರವಾಸವನ್ನು ಕೈಗೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.