ಲಕ್ನೋ: ಮಹತ್ವದ ಬೆಳವಣಿಗೆಯೊಂದರಲ್ಲಿ, ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್)ವು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐಗೆ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮುಕಿಮ್ ಸಿದ್ದಿಕಿ ಎಂಬ ಯುವಕನನ್ನು ಬಂಧಿಸಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಗೊಂಡಾ ಜಿಲ್ಲೆಯ ದಿನಪುರವಾ ನಿವಾಸಿ ಮುಕಿಮ್ ಸಿದ್ದಿಕಿ ಅಲಿಯಾಸ್ ಅರ್ಷದ್ ಎಂಬಾತನನ್ನು ಸೋಮವಾರ ಬಂಧಿಸಲಾಗಿದೆ ಎಂದು ಎಟಿಎಸ್ ಬಿಡುಗಡೆ ಮಾಡಿದ ಹೇಳಿಕೆ ತಿಳಿಸಿದೆ. ಆತನಿಗೆ 22 ವರ್ಷ ವಯಸ್ಸು ಎನ್ನಲಾಗಿದೆ ಆತನ ಬಳಿಯಿದ್ದ ಎರಡು ಸಿಮ್ ಕಾರ್ಡ್ಗಳು ಮತ್ತು ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ.
ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವ ಮೂಲಕ ಎಟಿಎಸ್ ಮುಂದಿನ ಕಾನೂನು ಕ್ರಮ ಕೈಗೊಳ್ಳುತ್ತಿದೆ ಎಂದು ವರದಿಗಳು ತಿಳಿಸಿವೆ.
ಜುಲೈ 16 ರಂದು, ಎಟಿಎಸ್ ಐಎಸ್ಐಗಾಗಿ ಬೇಹುಗಾರಿಕೆ ಮತ್ತು ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಮೊಹಮ್ಮದ್ ರಯೀಸ್, ಅರ್ಮಾನ್ ಅಲಿ ಮತ್ತು ಮೊಹಮ್ಮದ್ ಸಲ್ಮಾನ್ ಸಿದ್ದಿಕಿ ಎಂಬುವವರನ್ನು ಬಂಧಿಸಿತ್ತು. ಇವರ ವಿಚಾರಣೆಯ ಸಮಯದಲ್ಲಿ ಮುಕಿಮ್ ಹೆಸರು ಬಹಿರಂಗಗೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.