ನವದೆಹಲಿ: ನುಹ್ ಜಿಲ್ಲೆಯಲ್ಲಿ ನಡೆದ ಹಿಂಸಾಚಾರದಲ್ಲಿ ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಹೇಳಿದ್ದಾರೆ.
ಇಂದು ಬೆಳಿಗ್ಗೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಸಂಚುಕೋರರನ್ನು ನಿರಂತರವಾಗಿ ಗುರುತಿಸಲಾಗುತ್ತಿದೆ ಎಂದು ಹೇಳಿದರು. ಇದುವರೆಗೆ ಒಟ್ಟು 116 ಮಂದಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ ಅವರನ್ನು ರಿಮಾಂಡ್ಗೆ ಕಳುಹಿಸಲಾಗಿದೆ. ನುಹ್ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪರಿಸ್ಥಿತಿ ಸಾಮಾನ್ಯವಾಗಿದೆ. ಭದ್ರತಾ ಏಜೆನ್ಸಿಗಳನ್ನು ಕಟ್ಟೆಚ್ಚರದಲ್ಲಿ ಇರಿಸಲಾಗಿದೆ ಎಂದು ಅವರು ಹೇಳಿದರು.
ಹರಿಯಾಣದ ಇತರ ಭಾಗಗಳಿಂದ ಕೆಲವು ಘಟನೆಗಳು ವರದಿಯಾಗಿವೆ, ಅದನ್ನು ತಕ್ಷಣವೇ ನಿಯಂತ್ರಣಕ್ಕೆ ತರಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು. ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ನಾಗರಿಕರಲ್ಲಿ ಮನವಿ ಮಾಡಿದರು.
ಹರಿಯಾಣ ಪೊಲೀಸ್ನ 30 ತುಕಡಿಗಳು ಮತ್ತು ಕೇಂದ್ರದಿಂದ 20 ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದ್ದು, ಅದರಲ್ಲಿ 14 ತುಕಡಿಗಳನ್ನು ನುಹ್ಗೆ, 3 ಪಲ್ವಾಲ್ಗೆ, 2 ಫರಿದಾಬಾದ್ಗೆ ಮತ್ತು ಒಂದನ್ನು ಗುರುಗ್ರಾಮ್ಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.