ನವದೆಹಲಿ: ಜ್ಞಾನವಾಪಿ ಮಸೀದಿ ಪ್ರಕರಣದ ತೀರ್ಪನ್ನು ಅಲಹಾಬಾದ್ ಹೈಕೋರ್ಟ್ ಗುರುವಾರ ಪ್ರಕಟಿಸಿದೆ. ಕೆಲವು ಷರತ್ತುಗಳ ಅಡಿಯಲ್ಲಿ ಜ್ಞಾನವಾಪಿ ಮಸೀದಿ ಆವರಣದ ಸಮೀಕ್ಷೆ ನಡೆಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್ಐ) ನ್ಯಾಯಾಲಯ ಅನುಮತಿ ನೀಡಿದೆ. ಈ ನಿರ್ಧಾರವು ಹಿಂದೂಗಳ ಪಾಲಿಗೆ ದೊಡ್ಡ ಗೆಲುವು.
ಮಸೀದಿಯ ಎಎಸ್ಐ ಸಮೀಕ್ಷೆಗೆ ತಡೆ ನೀಡುವಂತೆ ಮುಸ್ಲಿಂ ಕಡೆಯವರು ಸಲ್ಲಿಸಿದ್ದ ಮನವಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. ಹೈಕೋರ್ಟ್ ತೀರ್ಪನ್ನು ಮುಸ್ಲಿಂ ಪಕ್ಷವು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸುವ ನಿರೀಕ್ಷೆಯಿದೆ. ನ್ಯಾಯ ಒದಗಿಸಲು ಮಸೀದಿಯ ಸರ್ವೆ ಅಗತ್ಯ ಎಂದು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ.
ಕೂಡಲೇ ಸಮೀಕ್ಷೆ ಆರಂಭಿಸುವಂತೆ ಹಿಂದೂ ಕಡೆಯವರು ಮನವಿ ಮಾಡಿದ್ದಾರೆ. ಜ್ಞಾನವಾಪಿ ಮಸೀದಿ ಸಂಕೀರ್ಣದ ಎಎಸ್ಐ ಸಮೀಕ್ಷೆಗೆ ಅನುಮತಿ ನೀಡಿದ ಅಲಹಾಬಾದ್ ಹೈಕೋರ್ಟ್ ತೀರ್ಪಿನ ಕುರಿತು ಪ್ರತಿಕ್ರಿಯಿಸಿದ ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, “ಈ ತೀರ್ಪನ್ನು ನಾನು ಸ್ವಾಗತಿಸುತ್ತೇನೆ, ಎಎಸ್ಐ ಸಮೀಕ್ಷೆ ನಂತರ ಜ್ಞಾನವಾಪಿ ಸಮಸ್ಯೆಯ ಸತ್ಯ ಹೊರಬರುವ ವಿಶ್ವಾಸವಿದೆ” ಎಂದಿದ್ದಾರೆ.
ಜ್ಞಾನವಾಪಿ ಸರ್ವೆ ಪ್ರಕರಣದಲ್ಲಿ ಹಿಂದೂ ಪರವಾದಿ ವಿಷ್ಣು ಶಂಕರ್ ಜೈನ್ ಅವರು ಪ್ರತಿಕ್ರಿಯೆ ನೀಡಿ, “ಜ್ಞಾನವಾಪಿ ಮಸೀದಿ ಸಂಕೀರ್ಣದ ಎಎಸ್ಐ ಸಮೀಕ್ಷೆಯನ್ನು ಪ್ರಾರಂಭಿಸಲು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ” ಎಂದಿದ್ದಾರೆ.
#WATCH | Allahabad HC has said that ASI survey of Gyanvapi mosque complex to start. Sessions court order upheld by HC: Vishnu Shankar Jain, representing the Hindu side in Gyanvapi survey case pic.twitter.com/mnQJrTzS09
— ANI (@ANI) August 3, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.