ಜೈಪುರ: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ತಮ್ಮ ಹುದ್ದೆಯಲ್ಲಿ ಉಳಿಯಲು ಯಾವುದೇ ಹಕ್ಕಿಲ್ಲ ಎಂದು ಬಿಜೆಪಿ ಪ್ರತಿಪಾದಿಸಿದ್ದು, ಮಹಿಳಾ ದೌರ್ಜನ್ಯ ಪ್ರಕರಣದಲ್ಲಿ ರಾಜ್ಯವು ಅಗ್ರಸ್ಥಾನದಲ್ಲಿದೆ ಎಂದು ಆರೋಪಿಸಿದೆ.
ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ರಾಜಸ್ಥಾನದ ಭರತ್ಪುರದ ಸಂಸದೆ ರಂಜಿತಾ ಕೋಲಿ, ರಾಜಸ್ಥಾನವು ಮಹಿಳೆಯರಿಗೆ ಗೌರವ ನೀಡುವ ಸಂಪ್ರದಾಯಕ್ಕೆ ಹೆಸರುವಾಸಿಯಾಗಿದೆ ಆದರೆ ಈಗ ಗೆಹ್ಲೋಟ್ ನೇತೃತ್ವದ ಸರ್ಕಾರ ರಾಜಸ್ಥಾನದ ಪ್ರತಿಷ್ಠೆಯನ್ನು ಹಾಳು ಮಾಡಿದೆ ಎಂದಿದ್ದಾರೆ.
ರಾಜಸ್ಥಾನದ ರಾಜ್ಸಮಂದ್ನ ಸಂಸದೆ ದಿಯಾ ಕುಮಾರಿ ಕೂಡ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು ಮತ್ತು ಇತ್ತೀಚಿನ ಹಲವಾರು ಲೈಂಗಿಕ ದೌರ್ಜನ್ಯ ಮತ್ತು ಮಹಿಳೆಯರ ಹತ್ಯೆ ಪ್ರಕರಣಗಳನ್ನು ಉಲ್ಲೇಖಿಸಿ ರಾಜ್ಯದಲ್ಲಿ ಮಹಿಳಾ ದೌರ್ಜನ್ಯ ಮಿತಿ ಮೀರಿದೆ ಎಂದು ಆರೋಪಿಸಿದ್ದಾರೆ.
ಜುಲೈ 28 ರಂದು ರಾಜಸ್ಥಾನದಲ್ಲಿ ಒಂದೇ ದಿನದಲ್ಲಿ 21 ಅಪರಾಧ ಘಟನೆಗಳು ನಡೆದಿವೆ ಎಂದು ಅವರು ಹೇಳಿದರು. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ವಾಗ್ದಾಳಿ ನಡೆಸಿದ ಅವರು, ವಾದ್ರಾ ಅವರು ರಾಜಸ್ಥಾನದ ರಣಥಂಬೋರ್ಗೆ ರಜೆಯ ಮೇಲೆ ಹೋಗುತ್ತಾರೆ ಆದರೆ ಸಂತ್ರಸ್ತ ಮಹಿಳೆಯರ ಕುಟುಂಬಗಳನ್ನು ಭೇಟಿಯಾಗುವುದಿಲ್ಲ.
ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದ ಅಂಕಿಅಂಶಗಳನ್ನು ಉಲ್ಲೇಖಿಸಿ ದಿಯಾ ಕುಮಾರಿ, ಮಹಿಳೆಯರ ವಿರುದ್ಧದ ಅಪರಾಧಗಳಲ್ಲಿ ರಾಜಸ್ಥಾನ ಮೊದಲ ಸ್ಥಾನದಲ್ಲಿದೆ ಎಂದು ಹೇಳಿದ್ದಾರೆ.
ನನ್ನೆಯಷ್ಟೇ ಬಾಲಕಿಯೊಬ್ಬಳ ಶವ ರಾಜಸ್ಥಾನ ಭಿಲ್ವಾರ ಪ್ರದೇಶದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.