ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಶುಕ್ರವಾರ ಕಾವೇರಿ ನದಿ ನೀರಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ತಕ್ಷಣದ ಮಧ್ಯಸ್ಥಿಕೆಯನ್ನು ಕೋರಿದ್ದಾರೆ. ಪ್ರಧಾನಿಗೆ ಪತ್ರ ಬರೆದಿರುವ ಅವರು, ತಮಿಳುನಾಡಿಗೆ ನೀಡಬೇಕಾದ ಕಾವೇರಿ ನೀರನ್ನು ಬಿಡುಗಡೆ ಮಾಡಲು ಕರ್ನಾಟಕಕ್ಕೆ ನಿರ್ದೇಶಿಸುವಂತೆ ಮತ್ತು ಅದನ್ನು ಖಚಿತಪಡಿಸಿಕೊಳ್ಳಲು ಸೂಕ್ತ ಕ್ರಮ ಕೈಗೊಳ್ಳುವಂತೆ ಜಲಶಕ್ತಿ ಸಚಿವಾಲಯಕ್ಕೆ ಸೂಚನೆ ನೀಡುವಂತೆ ಮನವಿ ಮಾಡಿದ್ದಾರೆ.
ಮೋದಿಗೆ ಬರೆದ ಪತ್ರದಲ್ಲಿ ಸ್ಟಾಲಿನ್ ಅವರು, ತಮ್ಮ ಕುರುವಾಯಿ ಭತ್ತದ ಬೆಳೆ ಉಳಿಸಲು ಕಾವೇರಿ ಡೆಲ್ಟಾದ ರೈತರು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಹೀಗಾಗಿ ನಮ್ಮ ಪಾಲಿನ ಕಾವೇರಿ ನೀರು ಬಿಡುಗಡೆಗೆ ಕರ್ನಾಟಕಕ್ಕೆ ಸೂಚಿಸಿ ಎಂದು ಮನವಿ ಮಾಡಿದ್ದಾರೆ.
ಕಾವೇರಿ ಡೆಲ್ಟಾದ ರೈತರ ಪ್ರಮುಖ ಬೆಳೆಯಾದ ಕುರುವಾಯಿಗೆ ನೀರಿನ ಸರಿಯಾದ ಪೂರೈಕೆ ನಿರ್ಣಾಯಕವಾಗಿದೆ. ತಮ್ಮ ರಾಜ್ಯದಲ್ಲಿ ಲಭ್ಯವಿರುವ ನೀರು ಇನ್ನೂ 15 ದಿನಗಳವರೆಗೆ ಕುರುವಾಯಿಯನ್ನು ಬೆಂಬಲಿಸುತ್ತದೆ. ಪಕ್ವತೆ ಮತ್ತು ಅತ್ಯುತ್ತಮ ಇಳುವರಿಗಾಗಿ ಇನ್ನೂ 45 ದಿನಗಳವರೆಗೆ ನೀರು ಬೇಕಾಗುತ್ತದೆ. ಜಲಶಕ್ತಿ ಸಚಿವಾಲಯದೊಂದಿಗೆ ಕಳೆದ ತಿಂಗಳು ಎರಡು ಬಾರಿ ವಿಷಯವನ್ನು ಪ್ರಸ್ತಾಪಿಸಿದರೂ ಕರ್ನಾಟಕವು ನೀರು ಬಿಡುಗಡೆ ಮಾಡುವಲ್ಲಿ ಕನಿಷ್ಠ ಪ್ರಯತ್ನ ಮಾಡಲಿಲ್ಲ ಎಂದಿದ್ದಾರೆ.
ನಿಗದಿತ ವೇಳಾಪಟ್ಟಿಯಂತೆ ತಮಿಳುನಾಡು ಪಾಲಿನ ಕಾವೇರಿ ನೀರನ್ನು ತಕ್ಷಣವೇ ಬಿಡುಗಡೆ ಮಾಡಲು ಮತ್ತು ಜೂನ್ ಮತ್ತು ಜುಲೈ ಕೊರತೆಯನ್ನು ನೀಗಿಸಲು ಕರ್ನಾಟಕಕ್ಕೆ ಸಲಹೆ ನೀಡಬೇಕು ಎಂದು ಸಿಎಂ ಸ್ಟಾಲಿನ್ ಮೋದಿ ಅವರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.