ತಿರುವನಂತಪುರಂ: ಭಾರತೀಯ ಸಂವಿಧಾನದ ಎಂಟನೇ ಶೆಡ್ಯೂಲ್ ಮತ್ತು ಎಲ್ಲಾ ಅಧಿಕೃತ ದಾಖಲೆಗಳಲ್ಲಿ ರಾಜ್ಯವನ್ನು ‘ಕೇರಳಂ’ ಎಂದು ಮರುನಾಮಕರಣ ಮಾಡಲು ಕೇಂದ್ರವನ್ನು ಒತ್ತಾಯಿಸುವ ನಿರ್ಣಯವನ್ನು ಕೇರಳ ಅಸೆಂಬ್ಲಿ ಸರ್ವಾನುಮತದಿಂದ ಅಂಗೀಕರಿಸಿತು.
ಕಾಂಗ್ರೆಸ್ ನೇತೃತ್ವದ ಯುಡಿಎಫ್ ಪ್ರತಿಪಕ್ಷಗಳು ಇದಕ್ಕೆ ಯಾವುದೇ ತಿದ್ದುಪಡಿ ಅಥವಾ ಮಾರ್ಪಾಡುಗಳನ್ನು ಸೂಚಿಸದ ಕಾರಣ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬುಧವಾರ ವಿಧಾನಸಭೆಯಲ್ಲಿ ನಿರ್ಣಯವನ್ನು ಮಂಡಿಸಿದರು.
ಮಲಯಾಳಂ ಭಾಷೆಯಲ್ಲಿ ರಾಜ್ಯದ ಹೆಸರು “ಕೇರಳಂ” ಎಂದು ಮುಖ್ಯಮಂತ್ರಿ ಹೇಳಿದರು. “1956ರ ನವೆಂಬರ್ 1 ರಂದು ಭಾಷೆಯ ಆಧಾರದ ಮೇಲೆ ರಾಜ್ಯಗಳನ್ನು ರಚಿಸಲಾಯಿತು. ಮಲಯಾಳಂ ಮಾತನಾಡುವ ಸಮುದಾಯಗಳಿಗೆ ಅಖಂಡ ಕೇರಳವನ್ನು ರಚಿಸುವ ಅಗತ್ಯವು ರಾಷ್ಟ್ರೀಯ ಸ್ವಾತಂತ್ರ್ಯ ಹೋರಾಟದ ಕಾಲದಿಂದಲೂ ಬಲವಾಗಿ ಹೊರಹೊಮ್ಮುತ್ತಿದೆ. ಆದರೆ ನಮ್ಮ ರಾಜ್ಯದ ಹೆಸರನ್ನು ಕೇರಳ ಎಂದು ಬರೆಯಲಾಗಿದೆ. ಇದನ್ನು ಕೇರಳಂ ಎಂದು ಬದಲಿಸುವುದು ನಮ್ಮ ಆಶಯ” ಎಂದಿದ್ದಾರೆ.
“ಈ ಸಭೆಯು ಸಂವಿಧಾನದ 3 ನೇ ಪರಿಚ್ಛೇದದ ಅಡಿಯಲ್ಲಿ ಕೇರಳಂ ಎಂದು ತಿದ್ದುಪಡಿ ಮಾಡಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರವನ್ನು ಸರ್ವಾನುಮತದಿಂದ ವಿನಂತಿಸುತ್ತದೆ. ಈ ಸದನವು ನಮ್ಮ ಭೂಮಿಯನ್ನು ‘ಕೇರಳಂ’ ಎಂದು ಸಂವಿಧಾನದ ಎಂಟನೇ ಶೆಡ್ಯೂಲ್ ಅನ್ವಯ ಮರುನಾಮಕರಣ ಮಾಡುವಂತೆಯೂ ಸಹ ವಿನಂತಿಸುತ್ತದೆ’’ ಎಂದರು.
Kerala CM Pinarayi said in the Assembly today, "A resolution under Rule 118 is being moved in this House requesting the Central Government to change the official name of our state to 'Keralam' in all languages included in the Eighth Schedule of the Constitution of India."
(Pic -… pic.twitter.com/UeqyY4NLKz
— ANI (@ANI) August 9, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.