ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ವಿರೋಧ ಪಕ್ಷಗಳು ತಂದಿರುವ ಅವಿಶ್ವಾಸ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ನೀಡಲಿದ್ದಾರೆ.
ಮಣಿಪುರದಲ್ಲಿ ಸರ್ಕಾರ ದೊಡ್ಡ ವಿಭಜನೆಯನ್ನು ಸೃಷ್ಟಿಸುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿ ಕಳೆದ ಎರಡು ದಿನಗಳಿಂದ ಸಂಸತ್ತನಲ್ಲಿ ತೀವ್ರ ಗದ್ದಲವನ್ನು ನಡೆಸುತ್ತಿವೆ. ಅಲ್ಲದೇ ಪ್ರಧಾನಿ ಪ್ರತಿಕ್ರಿಯೆಗೆ ಆಗ್ರಹಿಸಿ ಕಲಾಪಗಳನ್ನು ನಡೆಯದಂತೆ ಅಡ್ಡಿಪಡಿಸಿವೆ. ಅಲ್ಲದೇ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಿವೆ. ಇದೀಗ ಪ್ರತಿಪಕ್ಷಗಳ ಅವಿಶ್ವಾಸ ಗೊತ್ತುವಳಿಗೆ ಪ್ರತಿಕ್ರಿಯೆ ನೀಡಲು ಮೋದಿ ಸಜ್ಜಾಗಿ ನಿಂತಿದ್ದಾರೆ.
ಇನ್ನೊಂದೆಡೆ ಮಣಿಪುರ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರವು ತನ್ನ ಕಾರ್ಯಗಳನ್ನು ಸಮರ್ಥಿಸಿಕೊಂಡಿದೆ, ತನ್ನ ಕಲ್ಯಾಣ ಕಾರ್ಯಗಳ ಮೇಲೆ ಕೇಂದ್ರೀಕರಿಸಿ ಅದು ಪ್ರತಿಪಕ್ಷಗಳಿಗೆ ಉತ್ತರ ನೀಡಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೋವಿಡ್ ಮತ್ತು ಡ್ರಗ್ಸ್ ಹಾವಳಿ ವಿರುದ್ಧ ಹೋರಾಡಿದ ಕೇಂದ್ರದ ರಿಪೋರ್ಟ್ ಕಾರ್ಡ್ ಅನ್ನು ಪ್ರಸ್ತುತಪಡಿಸಿದರು. ಮಣಿಪುರ ಹಿಂಸಾಚಾರವನ್ನು ಪರಿಹರಿಸುವಲ್ಲಿ ಸರ್ಕಾರದ ಪ್ರಯತ್ನಗಳನ್ನು ಅವರು ಸ್ಪಷ್ಟಪಡಿಸಿದರು ಮತ್ತು ಜನರನ್ನು ದಾರಿತಪ್ಪಿಸಲು ಅವಿಶ್ವಾಸ ನಿರ್ಣಯವನ್ನು ತರಲಾಗಿದೆ ಎಂದು ಆರೋಪಿಸಿದರು.
ಅವಿಶ್ವಾಸ ನಿರ್ಣಯಕ್ಕೆ ಉತ್ತರ ನೀಡಲು ಪ್ರಧಾನಿ ಗುರುವಾರ ಲೋಕಸಭೆಗೆ ಹಾಜರಾಗಲಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಖಚಿತಪಡಿಸಿದ್ದಾರೆ.
ಲೋಕಸಭೆಯಲ್ಲಿ 331 ಸದಸ್ಯರನ್ನು ಹೊಂದಿರುವ ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ (ಎನ್ಡಿಎ) ಅವಿಶ್ವಾಸ ಮತ ಗೆಲ್ಲುವುದು ಖಚಿತ. ಬಹುಮತದ ಸಂಖ್ಯೆ 272 ಇರುವ ಕೆಳಮನೆಯಲ್ಲಿ ಬಿಜೆಪಿ ಒಂದೇ 303 ಸಂಸದರನ್ನು ಹೊಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.