ನವದೆಹಲಿ: ಭಾರತೀಯ ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವದ ಸ್ಮರಣಾರ್ಥ ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾರಂಭಿಸಿದ “ಹರ್ ಘರ್ ತಿರಂಗ” ಅಭಿಯಾನವು ಈ ವರ್ಷ ಸಂಸತ್ತಿನ ಸದಸ್ಯರು ದೆಹಲಿಯಲ್ಲಿ ಬೈಕ್ ರ್ಯಾಲಿಯೊಂದಿಗೆ ಮತ್ತೆ ಪ್ರಾರಂಭವಾಯಿತು.
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನವದೆಹಲಿಯ ಪ್ರಗತಿ ಮೈದಾನದಿಂದ ‘ಹರ್ ಘರ್ ತಿರಂಗಾ ಬೈಕ್ ರ್ಯಾಲಿ’ಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಶುಕ್ರವಾರ ಚಾಲನೆ ನೀಡಿದರು. ಕೇಂದ್ರ ಸಚಿವರಾದ ಜಿ. ಕಿಶನ್ ರೆಡ್ಡಿ, ಅನುರಾಗ್ ಠಾಕೂರ್ ಹಾಗೂ ಶೋಭಾ ಕರಂದ್ಲಾಜೆ ಅವರು ಪಕ್ಷದ ಕಾರ್ಯಕರ್ತರೊಂದಿಗೆ ರ್ಯಾಲಿಯಲ್ಲಿ ಪಾಲ್ಗೊಂಡರು. ಇದು ಮೇಜರ್ ಧ್ಯಾನ್ ಚಂದ್ ಸ್ಟೇಡಿಯಂನಲ್ಲಿ ಸಮಾಪಣಗೊಂಡಿದೆ.
ಆಜಾದಿ ಕಾ ಅಮೃತ್ ಮಹೋತ್ಸವದಡಿ ರಾಷ್ಟ್ರದಾದ್ಯಂತ ಹರ್ ಘರ್ ತಿರಂಗಾ ಅಭಿಯಾನ ನಡೆಸಲಾಗುತ್ತಿದೆ. ಈ ಮೂಲಕ ಜನರು ತಮ್ಮ ಆವರಣದಲ್ಲಿ ಧ್ವಜಗಳನ್ನು ಹಾರಿಸಲು ಪ್ರೋತ್ಸಾಹಿಸಲಾಗುತ್ತದೆ. ಜನರ ಹೃದಯದಲ್ಲಿ ದೇಶಭಕ್ತಿಯ ಭಾವನೆ ತುಂಬುವುದು ಮತ್ತು ಮಹಾನ್ ರಾಷ್ಟ್ರವನ್ನು ರಚಿಸಲು ಕೊಡುಗೆ ನೀಡಿದವರನ್ನು ಸ್ಮರಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ.
#WATCH | 'Har Ghar Tiranga' bike rally flagged off by Vice President Jagdeep Dhankhar, from Pragati Maidan in Delhi. Union Ministers G Kishan Reddy, Anurag Thakur and Shobha Karandlaje are also participating in the rally. | reported by ANI pic.twitter.com/NBH908Ac9I
— NDTV (@ndtv) August 11, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.