ನವದೆಹಲಿ: ಶುಕ್ರವಾರ ಮುಕ್ತಾಯಗೊಂಡ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಲೋಕಸಭೆಯು 45 ಪ್ರತಿಶತ ಮತ್ತು ರಾಜ್ಯಸಭೆಯು 63 ಪ್ರತಿಶತ ಉತ್ಪಾದಕತೆಯನ್ನು ದಾಖಲಿಸಿದೆ. ನವದೆಹಲಿಯಲ್ಲಿ ಇಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಅಧಿವೇಶನದಲ್ಲಿ ಲೋಕಸಭೆಯಲ್ಲಿ 22 ಮತ್ತು ರಾಜ್ಯಸಭೆಯಲ್ಲಿ 25 ಮಸೂದೆಗಳನ್ನು ಅಂಗೀಕರಿಸಲಾಗಿದೆ. ಅವುಗಳು ಸಿನಿಮಾಟೋಗ್ರಾಫ್ (ತಿದ್ದುಪಡಿ) ಮಸೂದೆ 2023, ಬಹು-ರಾಜ್ಯ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ, 2023, ಜನ್ ವಿಶ್ವಾಸ್ (ನಿಬಂಧನೆಗಳ ತಿದ್ದುಪಡಿ) ಮಸೂದೆ 2023, ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆ 2023, ಅನುಸಂಧಾನ್ ನ್ಯಾಷನಲ್ ರಿಸರ್ಚ್ 2023 ಮತ್ತು ಜೈವಿಕ ವೈವಿಧ್ಯ (ತಿದ್ದುಪಡಿ) ಮಸೂದೆ, 2023 ಸೇರಿವೆ ಎಂದಿದ್ದಾರೆ.
ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ಪ್ರತಿಪಕ್ಷಗಳ ಧೋರಣೆಯನ್ನು ಜೋಶಿ ಪ್ರಶ್ನಿಸಿದರು. ಮಣಿಪುರ ಹಿಂಸಾಚಾರದ ವಿಚಾರವನ್ನು ಮೊದಲ ದಿನದಿಂದ ಚರ್ಚಿಸಲು ಸರ್ಕಾರ ಸಿದ್ಧವಾಗಿತ್ತು ಮತ್ತು ಉಭಯ ಸದನಗಳಲ್ಲಿ ಚರ್ಚೆಗೆ ಲಿಖಿತ ಒಪ್ಪಿಗೆ ನೀಡಿತ್ತು ಎಂದು ಜೋಶಿ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.