ನವದೆಹಲಿ: ಪಶ್ಚಿಮಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷವು ‘ರಕ್ತದೊಂದಿಗೆ ಆಟವಾಡಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.
ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪಶ್ಚಿಮ ಬಂಗಾಳದ ಕ್ಷೇತ್ರೀಯ ಪಂಚಾಯತ್ ರಾಜ್ ಪರಿಷತ್ತನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಟಿಎಂಸಿ ಪಕ್ಷವು ಮತದಾರರಿಗೆ ಬೆದರಿಕೆ ಹಾಕುತ್ತಿದೆ ಮತ್ತು ಅವರ ಜೀವನವನ್ನು ನರಕವಾಗಿಸಿದೆ ಎಂದಿದ್ದಾರೆ.
“ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬಾರದು ಎಂಬುದನ್ನು ಖಚಿತಪಡಿಸಿಕೊಳ್ಳಲು ಅವರು ಏನು ಬೇಕಾದರೂ ಮಾಡುತ್ತಾರೆ. ಅವರು ಬಿಜೆಪಿ ಕಾರ್ಯಕರ್ತರಿಗೆ ಮಾತ್ರವಲ್ಲದೆ ಮತದಾರರಿಗೂ ಬೆದರಿಕೆ ಹಾಕುತ್ತಾರೆ. ಬೂತ್ಗಳನ್ನು ವಶಪಡಿಸಿಕೊಳ್ಳಲು ಗುತ್ತಿಗೆ ನೀಡಲಾಗಿದೆ. ಇದು ಅವರು ತಮ್ಮ ರಾಜ್ಯದಲ್ಲಿ ರಾಜಕೀಯ ಮಾಡುವ ವಿಧಾನವಾಗಿದೆ” ಎಂದು ಹೇಳಿದರು.
ಟಿಎಂಸಿ ಗೂಂಡಾಗಳಿಗೆ ಗುತ್ತಿಗೆ ನೀಡಿ ಮತ ಎಣಿಕೆ ದಿನದಂದು ಬೂತ್ ವಶಪಡಿಸಿಕೊಳ್ಳುವಂತೆ ಸೂಚಿಸಿತ್ತು ಎಂದು ಆರೋಪಿಸಿದರು.
“ಪಕ್ಷವು ಗೂಂಡಾಗಳಿಗೆ ಗುತ್ತಿಗೆ ನೀಡಿ ಮತ ಎಣಿಕೆ ದಿನದಂದು ಬೂತ್ಗಳನ್ನು ವಶಪಡಿಸಿಕೊಳ್ಳುವಂತೆ ಹೇಳಿತ್ತು. ಮತ ಎಣಿಕೆ ವೇಳೆ ಟಿಎಂಸಿ ಬಿಜೆಪಿ ಸದಸ್ಯರನ್ನು ಬಲವಂತವಾಗಿ ಕಚೇರಿಯಿಂದ ಹೊರ ಹಾಕಿತು ಮತ್ತು ವೀಕ್ಷಿಸಲು ಸಹ ಬಿಡಲಿಲ್ಲ. ಇಷ್ಟೆಲ್ಲ ಆದರೂ ಬಿಜೆಪಿ ಗೆದ್ದಾಗ, ಅವರು ನಮ್ಮ ಸದಸ್ಯರ ವಿರುದ್ಧ ರ್ಯಾಲಿಗಳನ್ನು ನಡೆಸಿದರು” ಎಂದು ಪ್ರಧಾನಿ ಹೇಳಿದರು.
ಪಶ್ಚಿಮ ಬಂಗಾಳದಲ್ಲಿ ಜುಲೈ 8 ರಂದು ಪಂಚಾಯತ್ ಚುನಾವಣೆಗಳು ನಡೆದವು ಮತ್ತು 63,229 -ಗ್ರಾಮ ಪಂಚಾಯತ್ ಸ್ಥಾನಗಳ ಮತಗಳ ಎಣಿಕೆ ಜುಲೈ 11 ರಂದು ನಡೆಯಿತು. ಈ ವೇಳೆ ಭಾರೀ ಹಿಂಸಾಚಾರಗಳು ನಡೆದವು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.