ನವದೆಹಲಿ: ವಿಶ್ವ ಆರೋಗ್ಯ ಸಂಸ್ಥೆ (WHO) ಮತ್ತು ಆಯುಷ್ ಸಚಿವಾಲಯವು ಗುಜರಾತ್ನ ಗಾಂಧಿನಗರದಲ್ಲಿ ಆಗಸ್ಟ್ 17-19ರಂದು ಮೊದಲ ಬಾರಿಗೆ ಸಾಂಪ್ರದಾಯಿಕ ಔಷಧದ ಜಾಗತಿಕ ಶೃಂಗಸಭೆಯನ್ನು ಆಯೋಜಿಸಲಿದೆ. ಆಯುಷ್ ಸಚಿವಾಲಯ ಇದಕ್ಕೆ ಸಹ ಆತಿಥ್ಯ ವಹಿಸಲಿದೆ.
ಸಂಶೋಧನೆ, ಸಾಕ್ಷ್ಯ ಮತ್ತು ಕಲಿಕೆಯ ನೀತಿ, ಡೇಟಾ ಮತ್ತು ನಿಯಮಗಳು, ನಾವೀನ್ಯತೆ ಮತ್ತು ಡಿಜಿಟಲ್ ಆರೋಗ್ಯ ಮತ್ತು ಜೀವವೈವಿಧ್ಯ, ಇಕ್ವಿಟಿ ಮತ್ತು ಸಾಂಪ್ರದಾಯಿಕ ಜ್ಞಾನವನ್ನು ಕೇಂದ್ರೀಕರಿಸಿ ಶೃಂಗಸಭೆಯನ್ನು ಆಯೋಜಿಸಲಾಗುತ್ತಿದೆ.
ಡಬ್ಲ್ಯುಎಚ್ಒ ಪ್ರಧಾನ ಕಾರ್ಯದರ್ಶಿ ಡಾ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ವಿಜ್ಞಾನಿಗಳು, ಸಾಂಪ್ರದಾಯಿಕ ಔಷಧದ ವೈದ್ಯರು, ಆರೋಗ್ಯ ಕಾರ್ಯಕರ್ತರು ಮತ್ತು ನಾಗರಿಕ ಸಮಾಜ ಸಂಸ್ಥೆಗಳ ಸದಸ್ಯರು ಭಾಗವಹಿಸಲಿದ್ದಾರೆ.
ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಆಯುಷ್ ಸಚಿವಾಲಯದ ರಾಜ್ಯ ಸಚಿವ ಮುಂಜ್ಪಾರಾ ಮಹೇಂದ್ರಭಾಯಿ ಕಲುಭಾಯಿ ಶೃಂಗಸಭೆಯ ಕುರಿತು ಮಾಹಿತಿ ನೀಡಿದರು. ಈವೆಂಟ್ ಕುರಿತು ಮಾತನಾಡಿದ ಮುಂಜ್ಪಾರಾ, ಶೃಂಗಸಭೆಯ ಫಲಿತಾಂಶವು ಮಹತ್ವದ್ದಾಗಿರಲಿದೆ ಮತ್ತು ಈ ಘೋಷಣೆಯು WHO ಗ್ಲೋಬಲ್ ಸೆಂಟರ್ ಫಾರ್ ಟ್ರೆಡಿಷನಲ್ ಮೆಡಿಸಿನ್ನ ಭವಿಷ್ಯವನ್ನು ರೂಪಿಸುವಲ್ಲಿ WHO ಗೆ ಸಹಾಯ ಮಾಡುತ್ತದೆ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.