ಶ್ರೀನಗರ: ಜಮ್ಮು-ಕಾಶ್ಮೀರ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆಗೆ ಸಾಕ್ಷಿಯಾಗಿದೆ. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಬಕ್ಷಿ ಕ್ರೀಡಾಂಗಣದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದರು. ಐದು ವರ್ಷಗಳ ನಂತರ, ಶ್ರೀನಗರದ ಐತಿಹಾಸಿಕ ಬಕ್ಷಿ ಕ್ರೀಡಾಂಗಣವು ಮತ್ತೊಮ್ಮೆ ಸ್ವಾತಂತ್ರ್ಯ ದಿನಾಚರಣೆಯನ್ನು ಆಯೋಜಿಸಿತು. ಈ ಸಂದರ್ಭದಲ್ಲಿ ಕಣಿವೆಯ ಅಪಾರ ಸಂಖ್ಯೆಯ ಜನರು ಸಮಾರಂಭವನ್ನು ವೀಕ್ಷಿಸಲು ಆಗಮಿಸಿದ್ದರು.
ಬಕ್ಷಿ ಕ್ರೀಡಾಂಗಣವು ದಶಕಗಳಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಯೋಜಿಸುತ್ತಾ ಬಂದಿದೆ, ಆದರೆ ನವೀಕರಣದ ಕಾರಣ 2018 ರಲ್ಲಿ ಕಾರ್ಯಕ್ರಮ ಆಯೋಜನೆಯನ್ನು ನಿಲ್ಲಿಸಲಾಯಿತು. ಹೀಗಾಗಿ ಸೋನಾವರ್ನ ಶೇರ್-ಎ-ಕಾಶ್ಮೀರ ಕ್ರಿಕೆಟ್ ಸ್ಟೇಡಿಯಂನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. ಈ ಬಾರಿ ಮತ್ತೆ ಬಕ್ಷಿ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆದಿದೆ.
ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸ್ಥಳದ ಸುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಬಕ್ಷಿ ಕ್ರೀಡಾಂಗಣದ ಸುತ್ತಲಿನ ರಸ್ತೆಗಳಲ್ಲಿ ಸಂಚಾರ ವ್ಯತ್ಯಯ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ಅಥವಾ ಅಪಾಯ ಸಂಭವಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜನಸಾಮಾನ್ಯರ ಜತೆಗೆ ವಾಹನಗಳ ಓಡಾಟದ ಮೇಲೆ ನಿಗಾ ತೀವ್ರಗೊಳಿಸಲಾಗಿದೆ. ಶ್ರೀನಗರದಲ್ಲಿ ಹೆಲಿಕಾಪ್ಟರ್ಗಳು ಮತ್ತು ಡ್ರೋನ್ಗಳೊಂದಿಗೆ ಮೂರು ಹಂತದ ಭದ್ರತಾ ವ್ಯವಸ್ಥೆಯನ್ನು ಯೋಜಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
#WATCH | J&K | Long queues of people were seen outside Bakshi Stadium in Srinagar as people arrived in large numbers to participate in #IndependenceDay celebrations today. pic.twitter.com/IrWufnveCc
— ANI (@ANI) August 15, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.