ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವಾಲಯದ ನಿರಂತರ ಪ್ರಯತ್ನಗಳ ನಂತರ ಲಿಬಿಯಾದಲ್ಲಿ ಸಿಲುಕಿಕೊಂಡಿದ್ದ ಪಂಜಾಬ್ ಮತ್ತು ಹರಿಯಾಣ ಮೂಲದ 17 ಭಾರತೀಯ ಪ್ರಜೆಗಳ ಗುಂಪನ್ನು ಯಶಸ್ವಿಯಾಗಿ ಭಾರತಕ್ಕೆ ಸ್ಥಳಾಂತರಿಸಲಾಗಿದೆ. ಲಿಬಿಯಾದ ಜ್ವಾರಾ ನಗರದಲ್ಲಿ ಶಸ್ತ್ರಸಜ್ಜಿತ ಗುಂಪು ಇವರನ್ನು ಸೆರೆಯಲ್ಲಿಟ್ಟಿತ್ತು ಎಂದು ಮೂಲಗಳು ತಿಳಿಸಿವೆ.
ಈ ಪ್ರಕರಣವನ್ನು ಲಿಬಿಯಾವನ್ನೂ ನೋಡಿಕೊಳ್ಳುತ್ತಿರುವ ಟ್ಯುನಿಸ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಗಮನಕ್ಕೆ ಈ ವರ್ಷ ಮೇ 26 ರಂದು ಸಿಕ್ಕಿಬಿದ್ದ ಭಾರತೀಯ ಪ್ರಜೆಗಳ ಕುಟುಂಬ ಸದಸ್ಯರು ತಂದಿದ್ದರು. ಅಂದಿನಿಂದ, ರಾಯಭಾರ ಕಚೇರಿಯು ಕುಟುಂಬ ಸದಸ್ಯರೊಂದಿಗೆ ನಿಕಟ ಸಂಪರ್ಕದಲ್ಲಿತ್ತು. ನಿಯಮಿತವಾಗಿ ಮೇ ಮತ್ತು ಜೂನ್ನಲ್ಲಿ ಲಿಬಿಯಾ ಅಧಿಕಾರಿಗಳೊಂದಿಗೆ ಮತ್ತು ಅನೌಪಚಾರಿಕ ಮಾರ್ಗಗಳ ಮೂಲಕ ವಿಷಯವನ್ನು ಫಾಲೋಅಪ್ ಮಾಡಿತ್ತಯ. ಇದರಿಂದಾಗಿ ಜೂನ್ 13, 2023 ರಂದು, ಲಿಬಿಯಾ ಅಧಿಕಾರಿಗಳು ಭಾರತೀಯ ಪ್ರಜೆಗಳನ್ನು ರಕ್ಷಣೆ ಮಾಡಿದರು, ಆದರೆ ಅವರು ಅಕ್ರಮವಾಗಿ ದೇಶವನ್ನು ಪ್ರವೇಶಿಸಿದ್ದಾರೆಂದು ಅವರನ್ನು ತಮ್ಮ ವಶದಲ್ಲೇ ಇರಿಸಿಕೊಂಡಿತ್ತು.
ಬಳಿಕ ಟುನಿಸ್ನಲ್ಲಿರುವ ಭಾರತೀಯ ರಾಯಭಾರಿ ಮತ್ತು ಭಾರತದ ವಿದೇಶಾಂಗ ಸಚಿವಾಲಯದ ಉನ್ನತ ಮಟ್ಟದ ಮಧ್ಯಪ್ರೇಶದ ಬಳಿಕ ಲಿಬಿಯಾ ಅಧಿಕಾರಿಗಳು ಅವರನ್ನು ಬಿಡುಗಡೆ ಮಾಡಲು ಒಪ್ಪಿಕೊಂಡರು. ಅವರು ಲಿಬಿಯಾದಲ್ಲಿ ತಂಗಿದ್ದಾಗ, ಭಾರತೀಯ ರಾಯಭಾರ ಕಚೇರಿಯು ಅಗತ್ಯ ಆಹಾರ ಪದಾರ್ಥಗಳು, ಔಷಧಗಳು ಮತ್ತು ಬಟ್ಟೆಗಳನ್ನು ಒದಗಿಸುವುದು ಸೇರಿದಂತೆ ಅಗತ್ಯಗಳನ್ನು ನೋಡಿಕೊಳ್ಳುತ್ತಿತ್ತು. ಅವರು ಪಾಸ್ಪೋರ್ಟ್ಗಳನ್ನು ಹೊಂದಿಲ್ಲದ ಕಾರಣ, ಅವರ ಭಾರತಕ್ಕೆ ಪ್ರಯಾಣಿಸಲು ತುರ್ತು ಪ್ರಮಾಣಪತ್ರಗಳನ್ನು ನೀಡಲಾಯಿತು. ಭಾರತಕ್ಕೆ ಹಿಂದಿರುಗಲು ಟಿಕೆಟ್ಗಳನ್ನು ಸಹ ಭಾರತೀಯ ರಾಯಭಾರ ಕಚೇರಿಯಿಂದ ಒದಗಿಸಲಾಯಿತು ಮತ್ತು ಅದಕ್ಕೆ ಹಣವನ್ನೂ ಪಾವತಿಸಲಾಯಿತು. ಇಷ್ಟೆಲ್ಲಾ ಶ್ರಮದ ಬಳಿಕ ಸಿಕ್ಕಿಬಿದ್ದ ಭಾರತೀಯ ಪ್ರಜೆಗಳು ನಿನ್ನೆ ಸಂಜೆ ನವದೆಹಲಿ ತಲುಪಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.