ಅಮೃತಸರ: ಪಂಜಾಬ್ನ ಗಡಿ ಜಿಲ್ಲೆಗಳು ಇತ್ತೀಚಿನ ದಿನಗಳಲ್ಲಿ ಪ್ರವಾಹದ ಹಾನಿಯನ್ನು ಎದುರಿಸುತ್ತಿವೆ, ಇನ್ನೊಂದೆಡೆ ಸಮಾಜವಿರೋಧಿಗಳು ಮಾದಕವಸ್ತು ಕಳ್ಳಸಾಗಣೆಯ ಮಾರ್ಗಗಳನ್ನು ಹುಡುಕಲು ಈ ಅವಕಾಶವನ್ನು ಬಳಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಪಂಜಾಬ್ ಪೊಲೀಸರ ಸಹಾಯದಿಂದ ಗಡಿ ಭದ್ರತಾ ಪಡೆ ಸಿಬ್ಬಂದಿ ಫಿರೋಜ್ಪುರ ಜಿಲ್ಲೆಯ ಗಡಿ ಗ್ರಾಮ ಗಟ್ಟಿ ಮಟರ್ನಲ್ಲಿ ಮಾದಕ ದ್ರವ್ಯಗಳ ಕಳ್ಳಸಾಗಣೆ ಪ್ರಯತ್ನವನ್ನು ವಿಫಲಗೊಳಿಸಿದೆ ಮತ್ತು ಪಾಕಿಸ್ತಾನದ ಗಡಿಯಿಂದ ಭಾರತಕ್ಕೆ ಪ್ರವೇಶಿಸುತ್ತಿದ್ದ ಇಬ್ಬರು ಕಳ್ಳಸಾಗಣೆದಾರರನ್ನು ಬಂಧಿಸಿದ್ದಾರೆ.
ಪಂಜಾಬ್ನ ಗಡಿ ಜಿಲ್ಲೆಗಳಾದ ಗುರುದಾಸ್ಪುರ್, ತರ್ನ್ತರನ್, ಫಿರೋಜ್ಪುರ ಮತ್ತು ಫಜಿಲ್ಕಾ ಇತ್ತೀಚಿನ ದಿನಗಳಲ್ಲಿ ಪ್ರವಾಹವನ್ನು ಎದುರಿಸುತ್ತಿವೆ ಆದರೆ ಕಳ್ಳಸಾಗಣೆದಾರರು ಮಾದಕ ವಸ್ತುಗಳನ್ನು ಕಳ್ಳಸಾಗಣೆ ಮಾಡಲು ಪ್ರವಾಹದ ನಡುವೆಯೇ ಪ್ರಯತ್ನಿಸುತ್ತಿದ್ದಾರೆ. ಗಡಿ ಜಿಲ್ಲೆಗಳಲ್ಲಿ ಹಲವು ಅಡಿಗಳಷ್ಟು ಪ್ರವಾಹದ ನೀರು ಇದ್ದರೂ ಗಡಿ ಭದ್ರತಾ ಪಡೆ ಸಿಬ್ಬಂದಿಗಳು ಗಡಿಯಲ್ಲಿ ಕ್ಷಿಪ್ರವಾಗಿ ಕಾವಲು ಕಾಯುತ್ತಿರುವುದಲ್ಲದೇ ಮಾದಕ ದ್ರವ್ಯ ಸಾಗಣೆಯನ್ನು ತಡೆಯುವುದರ ಜೊತೆಗೆ ಜನರನ್ನು ಪ್ರವಾಹದಿಂದ ರಕ್ಷಿಸುವ ನಿಟ್ಟಿನಲ್ಲಿ ತೀವ್ರ ನಿಗಾ ಇರಿಸಿದ್ದಾರೆ.
ಕಳೆದ ಮಧ್ಯರಾತ್ರಿ ಫಿರೋಜ್ಪುರ ಜಿಲ್ಲೆಯ ಸಟ್ಲೆಜ್ನ ದಡದಲ್ಲಿರುವ ಗಡಿ ಗ್ರಾಮ ಗಟ್ಟಿ ಮಾಟರ್ನಲ್ಲಿ ಪಂಜಾಬ್ ಪೊಲೀಸರೊಂದಿಗೆ ಸಿಬ್ಬಂದಿ ಇದೇ ರೀತಿಯ ಪ್ರಮುಖ ಕಳ್ಳಸಾಗಣೆ ಪ್ರಯತ್ನವನ್ನು ವಿಫಲಗೊಳಿಸಿದ್ದಾರೆ ಮತ್ತು ಎನ್ಕೌಂಟರ್ ನಂತರ 29 ಕಿಲೋಗ್ರಾಂಗಳಷ್ಟು ಮಾದಕವಸ್ತುಗಳನ್ನು ಹೊಂದಿರುವ 26 ಪ್ಯಾಕೆಟ್ಗಳನ್ನು ವಶಪಡಿಸಿಕೊಂಡಿದ್ದಾರೆ. ಎನ್ಕೌಂಟರ್ನಲ್ಲಿ ಒಬ್ಬ ಪಾಕಿಸ್ತಾನಿ ಸ್ಮಗ್ಲರ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರೆ ಆತನ ಮತ್ತೊಬ್ಬ ಸಹಚರನನ್ನು ಬಂಧಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.