ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಮತ್ತು ಬ್ಯಾಟಿಂಗ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರನ್ನು ಮತದಾರರ ಜಾಗೃತಿ ಮತ್ತು ಶಿಕ್ಷಣಕ್ಕಾಗಿ ಭಾರತೀಯ ಚುನಾವಣಾ ಆಯೋಗದ ರಾಷ್ಟ್ರೀಯ ಐಕಾನ್ ಎಂದು ಬುಧವಾರ ಗುರುತಿಸಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ತೆಂಡೂಲ್ಕರ್ ಮೂರು ವರ್ಷಗಳ ತಿಳುವಳಿಕೆ ಪತ್ರಕ್ಕೆ (ಎಂಒಯು) ಸಹಿ ಹಾಕಿದರು.
ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತರಾದ ಅನುಪ್ ಚಂದ್ರ ಪಾಂಡೆ ಮತ್ತು ಅರುಣ್ ಗೋಯೆಲ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ತೆಂಡೂಲ್ಕರ್, “ನಾವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ, ಮತ್ತು ನಮ್ಮ ಮತದಾನದ ಹಕ್ಕನ್ನು ಸರಿಯಾದ ಶ್ರದ್ಧೆಯಿಂದ ಚಲಾಯಿಸುವುದು ನಮ್ಮ ಪ್ರಧಾನ ಜವಾಬ್ದಾರಿಯಾಗಿದೆ. ಇದು ನಿರ್ಲಕ್ಷ್ಯ ಮಾಡಲಾಗದ ಜವಾಬ್ದಾರಿಯಾಗಿದೆ. ಚುನಾವಣೆಗಳು ಯಾವಾಗ ನಡೆಯುತ್ತವೆ ಮತ್ತು ಯಾವಾಗ ಹೊರಗೆ ಹೋಗಿ ಮತ ಚಲಾಯಿಸಬೇಕು ಎಂಬುದನ್ನು ಪ್ರತಿಯೊಬ್ಬರೂ ತಿಳಿದಿರಬೇಕು” ಎಂದರು.
“ಭಾರತವು ವಿಶ್ವದ ಅತ್ಯಂತ ಯುವ ವಯಸ್ಸಿನ ರಾಷ್ಟ್ರವಾಗಿದೆ. ಮತದಾನದ ವಿಷಯಕ್ಕೆ ಬಂದಾಗ ನಾವು ವಿಶ್ವದಲ್ಲಿ ಜವಾಬ್ದಾರಿಯುತ ರಾಷ್ಟ್ರ ಎಂದು ಹೇಳಬಹುದೇ? ಇದಕ್ಕೆ ಪ್ರಾಮಾಣಿಕ ಉತ್ತರ ಇಲ್ಲ. ಒಬ್ಬ ಭಾರತೀಯನಾಗಿ, ಭಾರತವು ವಿಶ್ವದ ಅತ್ಯಂತ ಕಿರಿಯ ವಯಸ್ಸಿನ ಜನರಿರುವ ರಾಷ್ಟ್ರ ಎಂದು ಹೇಳಲು ನಾನು ಬಯಸುತ್ತೇನೆ ಆದರೆ ಮತ ಚಲಾಯಿಸುವ ವಿಷಯಕ್ಕೆ ಬಂದಾಗ ವಿಶ್ವದ ಅತ್ಯಂತ ಜವಾಬ್ದಾರಿಯುತ ರಾಷ್ಟ್ರವಾಗಬೇಕಿದೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.