ನವದೆಹಲಿ: ಚಂದ್ರನ ದಕ್ಷಿಣ ಧ್ರುವದಲ್ಲಿ ಬಾಹ್ಯಾಕಾಶ ನೌಕೆಯನ್ನು ಇಳಿಸಿದ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಬ್ರಿಕ್ಸ್ ಶೃಂಗಸಭೆಗಾಗಿ ದಕ್ಷಿಣ ಆಫ್ರಿಕಾದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಚಂದ್ರಯಾನ-3 ರ ಲ್ಯಾಂಡಿಂಗ್ ಪ್ರಯತ್ನಕ್ಕೆ ವರ್ಚುವಲ್ ಆಗಿ ಸಾಕ್ಷಿಯಾದರು.
“ಈ ಕ್ಷಣ ಅಮೂಲ್ಯ ಮತ್ತು ಅಭೂತಪೂರ್ವವಾಗಿದೆ. ಈ ಕ್ಷಣ ನವ ಭಾರತದ ಜೈಘೋಷವಾಗಿದೆ. ಈ ಕ್ಷಣ 1.4 ಬಿಲಿಯನ್ ಹೃದಯ ಬಡಿತಗಳ ಶಕ್ತಿಯಾಗಿದೆ. ಅಮೃತ ಕಾಲದ ಈ ಹಂತದಲ್ಲಿ ಅಮೃತ ವರ್ಷ ಯಶಸ್ವಿಯಾಗಿದೆ” ಎಂದು ರಾಷ್ಟ್ರವನ್ನು ಉದ್ದೇಶಿಸಿ ಆನ್ಲೈನ್ ಭಾಷಣದಲ್ಲಿ ಪ್ರಧಾನಿ ಹೇಳಿದರು.
“ಈ ಅಭೂತಪೂರ್ವ ಸಾಧನೆಗಾಗಿ ನಾನು ಇಸ್ರೋವನ್ನು, ಅದರ ವಿಜ್ಞಾನಿಗಳನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ನಾನು ದಕ್ಷಿಣ ಆಫ್ರಿಕಾದಲ್ಲಿರಬಹುದು ಆದರೆ ನನ್ನ ಹೃದಯವು ಯಾವಾಗಲೂ ಚಂದ್ರಯಾನ ಮಿಷನ್ನಲ್ಲಿದೆ” ಎಂದರು.
“ಈ ಹಿಂದೆ ಯಾವುದೇ ದೇಶಕ್ಕೂ ಚಂದ್ರನ ಈ ಭಾಗದಲ್ಲಿ ಇಳಿಯಲು ಸಾಧ್ಯವಾಗಿಲ್ಲ. ಈ ಮಿಷನ್ ಚಂದ್ರನ ಎಲ್ಲಾ ನಿರೂಪಣೆಗಳು ಮತ್ತು ಕಥೆಗಳನ್ನು ಬದಲಾಯಿಸುತ್ತದೆ. ನಾವು ನವ ಭಾರತದ ಹೊಸ ಹಾರಾಟಕ್ಕೆ ಸಾಕ್ಷಿಯಾಗಿದ್ದೇವೆ. ಹೊಸ ಇತಿಹಾಸವನ್ನು ಬರೆಯಲಾಗಿದೆ” ಎಂದು ಪ್ರಧಾನಿ ಹೇಳಿದರು.
ಭಾರತವು ಚಂದ್ರನಲ್ಲಿಗೆ ನೌಕೆ ಕಳುಹಿಸಿದ ರಷ್ಯಾ, ಯುನೈಟೆಡ್ ಸ್ಟೇಟ್ಸ್ ಮತ್ತು ಚೀನಾದ ಬಳಿಕ ನಾಲ್ಕನೇ ದೇಶವಾಗಿ ಹೊರಹೊಮ್ಮಿದೆ. ಚಂದ್ರನ ದಕ್ಷಿಣ ಧ್ರುವಕ್ಕೆ ನೌಕೆ ಕಳುಹಿಸಿದ ಮೊದಲ ದೇಶವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.