ನವದೆಹಲಿ: ರಕ್ಷಾ ಬಂಧನ ಹಬ್ಬ ಸಮೀಪಿಸುತ್ತಿದೆ. ನಾನಾ ತರನಾದ ರಕ್ಷೆಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ವರ್ಷ ಚೀನಾದ ರಾಖಿಗಳಿಗೆ ಬೇಡಿಕೆ ಕುಸಿದಿದೆ ಎಂದು ದೇಶದ ಹಲವು ಭಾಗಗಳ ವ್ಯಾಪಾರಿಗಳು ಹೇಳುತ್ತಿದ್ದಾರೆ. ಭಾರತ ಮತ್ತು ಚೀನಾ ನಡುವಿನ ಉದ್ವಿಗ್ನತೆಯಿಂದಾಗಿ ಜನರು ಚೀನಾದ ರಾಖಿಗಳನ್ನು ಖರೀದಿಸಲು ನಿರಾಕರಿಸುತ್ತಿದ್ದಾರೆ. ಮಹಿಳೆಯರು ಚೀನಾದ ರಾಖಿಗಳಿಗಿಂತ ಭಾರತದಲ್ಲಿ ತಯಾರಿಸಿದ ರಾಖಿಗಳಿಗೆ ಆದ್ಯತೆ ನೀಡುತ್ತಿದ್ದಾರೆ. ಸ್ಥಳೀಯ ರಾಖಿಗಳನ್ನು ಖರೀದಿಸುವ ಮೂಲಕ ಭಾರತೀಯ ಆರ್ಥಿಕತೆಯನ್ನು ಹೆಚ್ಚಿಸಲು ಸ್ಥಳೀಯರು ಉದ್ದೇಶಿಸಿದ್ದಾರೆ ಎಂದು ವರದಿಗಳು ಹೇಳುತ್ತಿವೆ.
ಸ್ಥಳೀಯ ವ್ಯಾಪಾರಿಗಳು ರಕ್ಷಾಬಂಧನಕ್ಕಾಗಿ ಚೀನಾದ ರಾಖಿಗಳನ್ನು ಮಾರಾಟ ಮಾಡುತ್ತಿಲ್ಲ. ಭಾರತ ನಿರ್ಮಿತ ರಾಖಿಗಳಿಂದ ಸ್ಥಳೀಯರಲ್ಲಿ ಉದ್ಯೋಗಾವಕಾಶವೂ ಹೆಚ್ಚುತ್ತಿದೆ ಎನ್ನುತ್ತಾರೆ ವ್ಯಾಪಾರಿಗಳು.
ವ್ಯಾಪಾರದ ಅಂದಾಜಿನ ಪ್ರಕಾರ, ಪ್ರತಿವರ್ಷ ಸುಮಾರು 50 ಕೋಟಿ ರಾಖಿಗಳನ್ನು ದೇಶದೊಳಗೆ ಮಾರಾಟ ಮಾಡಲಾಗುತ್ತದೆ.
ಸರ್ಕಾರದ ಪ್ರಯತ್ನಗಳ ಜೊತೆಗೆ, ತಯಾರಕರು ಮತ್ತು ವ್ಯಾಪಾರಿಗಳು ಸಹ ಕರಕುಶಲ ವಸ್ತುಗಳ ದೇಶೀಯ ಉತ್ಪಾದನೆಯನ್ನು ಪುನರುಜ್ಜೀವನಗೊಳಿಸಲು ತಮ್ಮ ಪ್ರಯತ್ನಗಳನ್ನು ಮಾಡುತ್ತಿದ್ದಾರೆ, ವಿಶೇಷವಾಗಿ ಜನ್ಮಾಷ್ಟಮಿ, ಗಣೇಶ ಚತುರ್ಥಿಯಂತಹ ವಿವಿಧ ಹಬ್ಬಗಳ ಭಾಗವಾಗಿರುವ ಉತ್ಪನ್ನಗಳ ವಿಷಯದಲ್ಲೂ ಚೀನಿ ವಸ್ತುಗಳನ್ನು ದೂರವಿಟ್ಟು ಸ್ಥಳಿಯ ವಸ್ತುಗಳಿಗೆ ಆದ್ಯತೆ ನೀಡಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.