ನವದೆಹಲಿ: ಗಡಿ ಭದ್ರತಾ ಪಡೆ (ಬಿಎಸ್ಎಫ್) ಕೇವಲ ನಮ್ಮ ಗಡಿಗಳನ್ನು ರಕ್ಷಿಸುತ್ತಿಲ್ಲ, ಕ್ರೀಡೆಯಲ್ಲಿ ಪದಕಗಳನ್ನು ಗೆಲ್ಲುವಲ್ಲಿ ಮತ್ತು ದೇಶಕ್ಕೆ ಪ್ರಶಸ್ತಿಗಳನ್ನು ತರುವಲ್ಲಿಯೂ ಕೊಡುಗೆ ನೀಡುತ್ತಿದೆ ಎಂದು ಕೇಂದ್ರ ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.
ಚಂಡೀಗಢದ ಬಳಿಯ ಮೊಹಾಲಿಯಲ್ಲಿರುವ ಬಿಎಸ್ಎಫ್ ಪಂಜಾಬ್ ಫ್ರಾಂಟಿಯರ್ ಕ್ಯಾಂಪ್ ಲಖನೌರ್ನಲ್ಲಿ ಗಡಿ ಭದ್ರತಾ ಪಡೆಯ ಕ್ರೀಡಾ ಪಟುಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.
ಕ್ರೀಡಾ ಕ್ಷೇತ್ರದಲ್ಲಿ ಬಿಎಸ್ಎಫ್ ಯೋಧರು ಹಲವು ಸಾಧನೆ ಮಾಡಿದ್ದಾರೆ ಎಂದ ಸಚಿವರು, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿರುವ ಯೋಧರನ್ನು ಶ್ಲಾಘಿಸಿದರು. ಸೇವೆಗೆ ಸೇರಿದ ನಂತರ ಕ್ರೀಡಾ ಪಟುಗಳು ತೃಪ್ತರಾಗದೆ ಹೆಚ್ಚಿನ ಸಾಧನೆಗಾಗಿ ತಮ್ಮ ಪ್ರಯತ್ನವನ್ನು ಮುಂದುವರೆಸಬೇಕು ಎಂದರು. ಕ್ರೀಡಾ ಅಭಿವೃದ್ಧಿ ಕೇಂದ್ರ ಕೈಗೊಂಡಿರುವ ಕ್ರಮಗಳನ್ನೂ ಅವರು ಪ್ರಸ್ತಾಪಿಸಿದರು.
ಕ್ರೀಡಾಪಟುಗಳಿಗಾಗಿ ಕ್ರೀಡಾ ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಹೇಳಿದ ಅವರು, ಬಿಎಸ್ಎಫ್ನ ಬೇಡಿಕೆಯ ಮೇರೆಗೆ ಜಲಂಧರ್ನಲ್ಲಿ ಹಾಕಿ ಆಸ್ಟ್ರೋಟರ್ಫ್ ಸೌಲಭ್ಯವನ್ನು ಒದಗಿಸಲಾಗಿದೆ, ಇದು ಬಿಎಸ್ಎಫ್ ಹಾಕಿ ಆಟಗಾರರಿಗೆ ಸಹಾಯ ಮಾಡುತ್ತದೆ. ಹತ್ತಿರದ ಪ್ರದೇಶಗಳ ಹಾಕಿ ಆಟಗಾರರಿಗೆ ಸಹಾಯ ಮಾಡುವ ಮೂಲಕ ಅವರ ಕೌಶಲ್ಯವನ್ನು ಸುಧಾರಿಸುತ್ತದೆ ಎಂದರು.
ಕೇಂದ್ರವು ವಿವಿಧ ಕ್ರೀಡೆಗಳಿಗೆ 400 ತರಬೇತುದಾರರನ್ನು ನೇಮಿಸಿದೆ. ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ತರಬೇತುದಾರರನ್ನು ಡೆಪ್ಯುಟೇಶನ್ನಲ್ಲಿ ತೆಗೆದುಕೊಳ್ಳಲಾಗುತ್ತಿದೆ ಎಂದ ಅವರು, ಬಿಎಸ್ಎಫ್ ಕ್ರೀಡಾ ಪಟುಗಳಿಗೂ ಡೆಪ್ಯೂಟೇಶನ್ನಲ್ಲಿ ಅವಕಾಶ ನೀಡಬಹುದು. ಇದು ಅವರಿಗೆ ಹೆಚ್ಚಿನ ಮಾನ್ಯತೆ ನೀಡುತ್ತದೆ ಎಂದು ಅವರು ಹೇಳಿದರು. ಪಂಜಾಬ್ ಸರ್ಕಾರವು ಕ್ರೀಡಾ ಪಟುಗಳಿಗೆ ಸಾಕಷ್ಟು ಸೌಲಭ್ಯಗಳನ್ನು ಒದಗಿಸಿಲ್ಲ ಎಂದು ಸಚಿವರು ಟೀಕಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.