ನವದೆಹಲಿ: ಸಂವಿಧಾನದ 35ಎ ವಿಧಿಯು ಜಮ್ಮು ಮತ್ತು ಕಾಶ್ಮೀರದಲ್ಲಿ ವಾಸಿಸದ ಜನರನ್ನು ಕೆಲವು ಪ್ರಮುಖ ಸಾಂವಿಧಾನಿಕ ಹಕ್ಕುಗಳಿಂದ ವಂಚಿತವಾಗಿಸಿತ್ತು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೇಳಿದ್ದಾರೆ.
ಸಮಾನತೆ, ರಾಜ್ಯ ಸರ್ಕಾರದಲ್ಲಿ ಉದ್ಯೋಗ ಮತ್ತು ಭೂಮಿ ಖರೀದಿಸುವ ಹಕ್ಕು ಈ ಎಲ್ಲವನ್ನು 35ಎ ವಿಧಿಯು ನಾಗರಿಕರಿಂದ ಕಸಿದುಕೊಂಡಿತು. ಜಮ್ಮು-ಕಾಶ್ಮೀರ ನಿವಾಸಿಗಳು ವಿಶೇಷ ಹಕ್ಕುಗಳನ್ನು ಹೊಂದಿದ್ದರು, ಅನಿವಾಸಿಗಳನ್ನು ಇದರಿಂದ ಹೊರಗಿಡಲಾಯಿತು” ಎಂದಿದ್ದಾರೆ.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ 370 ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ 11 ನೇ ದಿನದ ವಿಚಾರಣೆಯ ಸಂದರ್ಭದಲ್ಲಿ ಅವರು ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.
ಆರ್ಟಿಕಲ್ 35A, ಆರ್ಟಿಕಲ್ 370 ಅನ್ನು ಒಟ್ಟಿಗೆ 2019 ರ ಆಗಸ್ಟ್ನಲ್ಲಿ ರದ್ದುಗೊಳಿಸಲಾಯಿತು, ಈ ಕಾಯ್ದೆಗಳನ್ನು ಜಮ್ಮು-ಕಾಶ್ಮೀರದ ಶಾಶ್ವತ ನಿವಾಸಿಗಳನ್ನು ವ್ಯಾಖ್ಯಾನಿಸಲು ಮತ್ತು ಅವರಿಗೆ ಸಾರ್ವಜನಿಕ ಉದ್ಯೋಗ, ಸ್ಥಿರ ಆಸ್ತಿ ಮತ್ತು ವಸಾಹತುಗಳ ವಿಷಯದಲ್ಲಿ ವಿಶೇಷ ಹಕ್ಕುಗಳು ಮತ್ತು ಸವಲತ್ತುಗಳನ್ನು ಒದಗಿಸಲು ಅವಕಾಶ ಮಾಡಿಕೊಟ್ಟಿತ್ತು.
“ಭಾರತೀಯ ಸಂವಿಧಾನಕ್ಕೆ ಮಾಡಲಾದ ಯಾವುದೇ ತಿದ್ದುಪಡಿಯು ಜಮ್ಮು ಮತ್ತು ಕಾಶ್ಮೀರಕ್ಕೆ 370 ನೇ ವಿಧಿಯಿಂದಾಗಿ ಅನ್ವಯಿಸುತ್ತಿರಲಿಲ್ಲ. ಆದ್ದರಿಂದ 2019 ರವರೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಶಿಕ್ಷಣದ ಹಕ್ಕನ್ನು ಎಂದಿಗೂ ಜಾರಿಗೊಳಿಸಲಾಗಿಲ್ಲ” ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.