ನವದೆಹಲಿ: ಸಿಂಗಾಪುರಕ್ಕೆ ಅಕ್ಕಿ ರಫ್ತಿಗೆ ಅವಕಾಶ ನೀಡಲು ಭಾರತ ನಿರ್ಧರಿಸಿದೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಂಗಳವಾರ ತಿಳಿಸಿದೆ. “ಈ ನಿಟ್ಟಿನಲ್ಲಿ ಔಪಚಾರಿಕ ಆದೇಶಗಳನ್ನು ಶೀಘ್ರದಲ್ಲೇ ಹೊರಡಿಸಲಾಗುವುದು” ಎಂದು ಸಚಿವಾಲಯದ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಳೆದ ತಿಂಗಳು, ಕಳೆದ ವರ್ಷ ಮುರಿದ ಅಕ್ಕಿ ರಫ್ತಿನ ಮೇಲೆ ನಿಷೇಧ ಹೇರಿದ ನಂತರ ಭಾರತವು ವ್ಯಾಪಕವಾಗಿ ಸೇವಿಸುವ ಬಾಸ್ಮತಿ ಅಲ್ಲದ ಬಿಳಿ ಅಕ್ಕಿಯ ರಫ್ತಿನ ಮೇಲೆ ನಿಷೇಧ ಹೇರಿತ್ತು, ಈ ಮೂಲಕ ಖರೀದಿದಾರರನ್ನು ಆಶ್ಚರ್ಯಗೊಳಿಸಿತು. ಈ ವರ್ಷಾಂತ್ಯದಲ್ಲಿ ನಡೆಯಲಿರುವ ರಾಜ್ಯಗಳ ಚುನಾವಣೆಗೆ ಮುನ್ನ ಹಣದುಬ್ಬರವನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿರುವ ಕೇಂದ್ರ, ಶುಕ್ರವಾರ ಅಕ್ಕಿ ರಫ್ತಿನ ಮೇಲಿನ ನಿರ್ಬಂಧಗಳನ್ನು ವಿಸ್ತರಿಸಿದೆ ಮತ್ತು ಅಕ್ಕಿಯ ಮೇಲೆ 20% ಸುಂಕವನ್ನು ಅಕ್ಟೋಬರ್ 15 ರವರೆಗೆ ಜಾರಿಗೆ ತಂದಿದೆ. ವಿಶ್ವ ಅಕ್ಕಿ ರಫ್ತಿನಲ್ಲಿ ಭಾರತವು 40% ಕ್ಕಿಂತ ಹೆಚ್ಚು ಪಾಲು ಹೊಂದಿದೆ.
“ಭಾರತ ಮತ್ತು ಸಿಂಗಾಪುರ ಬಹಳ ನಿಕಟ ಸಹಭಾಗಿತ್ವ ಹೊಂದಿದೆ. ಹಿತಾಸಕ್ತಿ, ಆರ್ಥಿಕತೆ ಮತ್ತು ಜನಸಂಪರ್ಕ ಇವೆಲ್ಲವೂ ಎರಡೂ ದೇಶಗಳ ಮಧ್ಯೆ ಮಿಳಿತವಾಗಿದೆ. ಈ ವಿಶೇಷ ಸಂಬಂಧ ಇರುವ ಹಿನ್ನೆಲೆಯಲ್ಲಿ ಸಿಂಗಾಪುರದ ಆಹಾರ ಭದ್ರತಾ ಅಗತ್ಯತೆಗಳನ್ನು ಪೂರೈಸಲು ಭಾರತ ಅಕ್ಕಿ ರಫ್ತಿಗೆ ಅನುಮತಿ ಕೊಡಲು ನಿರ್ಧರಿಸಿದೆ” ಎಂದು ಕೇಂದ್ರ ವಿದೇಶಾಂಗ ವ್ಯವಹಾರ ಸಚಿವಾಲಯದ ಅಧಿಕೃತ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ.
ಈ ಬಗ್ಗೆ ಶೀಘ್ರದಲ್ಲೇ ಅಧಿಕೃತವಾಗಿ ಆದೇಶ ಹೊರಡಿಸಲಾಗುವುದು ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.