ಶ್ರೀನಗರ: ಜಮ್ಮುವಿನ ದೋಡಾ ಜಿಲ್ಲೆಯಲ್ಲಿ ಫಿರ್ದೌಸ್ ಅಹ್ಮದ್ ವಾನಿ ಮತ್ತು ಖುರ್ಷಿದ್ ಅಹ್ಮದ್ ಮಲಿಕ್ ಎಂಬ ಇಬ್ಬರು ಭಯೋತ್ಪಾದಕರನ್ನು ರಾಜ್ಯ ತನಿಖಾ ಸಂಸ್ಥೆ ಬಂಧಿಸಿದೆ. ಕಳೆದ 48 ಗಂಟೆಗಳಲ್ಲಿ ಈ ಪ್ರದೇಶದಲ್ಲಿ 10ನೇ ಭಯೋತ್ಪಾದಕನ ಬಂಧನ ಇದಾಗಿದೆ. ಬಂಧಿತರು ದಶಕಗಳಿಂದ ತಲೆಮರೆಸಿಕೊಂಡು ವಾಸಿಸುತ್ತಿದ್ದರು.
ನಿನ್ನೆ, ರಾಜ್ಯ ತನಿಖಾ ಸಂಸ್ಥೆ (ಎಸ್ಐಎ) ಮತ್ತು ಅಪರಾಧ ತನಿಖಾ ಇಲಾಖೆ (ಸಿಐಡಿ) ನಡೆಸಿದ ವಿಶೇಷ ಕಾರ್ಯಾಚರಣೆಯ ಭಾಗವಾಗಿ ಮೂರು ದಶಕಗಳಿಂದ ಅಧಿಕಾರಿಗಳ ಕಣ್ತಪ್ಪಿಸಿ ಓಡಾಡುತ್ತಿದ್ದ ಎಂಟು ಭಯೋತ್ಪಾದಕರನ್ನು ಜಮ್ಮುವಿನಲ್ಲಿ ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಇವರುಗಳು ದೋಡಾ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಭಯೋತ್ಪಾದಕ ಮತ್ತು ವಿಚ್ಛಿದ್ರಕಾರಕ ಚಟುವಟಿಕೆಗಳ (ತಡೆ) ಕಾಯಿದೆ (ಟಾಡಾ) ಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಬೇಕಾಗಿದ್ದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡುವ ತನ್ನ ಬೃಹತ್ ಗುರಿಯನ್ನು ಸಾಧಿಸಲು ಎಸ್ಐಎ ಈ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.
ಸಿಐಡಿಯಿಂದ ಪಡೆದ ಗುಪ್ತಚರ ಮಾಹಿತಿಯ ಸಹಾಯದಿಂದ, ಎಸ್ಐಎಯು ಸಮಾಜದಲ್ಲಿ ಜನರೊಂದಿಗೆ ಬೆರೆತುಕೊಂಡು ಭಯೋತ್ಪಾದನ ಕೃತ್ಯ ನಿರ್ವಹಿಸುತ್ತಿದ್ದ ಇವರನ್ನು ಪತ್ತೆಹಚ್ಚಲು ತಿಂಗಳುಗಟ್ಟಲೆಯಿಂದ ಕಾರ್ಯಾಚರಣೆಯನ್ನು ನಡೆಸುತ್ತಿದೆ. 327 ಟಾಡಾ ಮತ್ತು ಭಯೋತ್ಪಾದನೆ ತಡೆ ಕಾಯ್ದೆ (ಪೋಟಾ) ಪ್ರಕರಣಗಳಲ್ಲಿ ಒಟ್ಟು 734 ಪರಾರಿಯಾದ ಉಗ್ರರ ಪೈಕಿ ಎಸ್ಐಎ 369 ಜನರನ್ನು ಗುರುತಿಸಿದೆ, 80 ಮಂದಿ ಈಗಾಗಲೇ ಸಾವನ್ನಪ್ಪಿದ್ದಾರೆ, 45 ವಿದೇಶದಲ್ಲಿ ನೆಲೆಸಿದ್ದಾರೆ, 127 ಮಂದಿ ಪತ್ತೆಯಾಗಿಲ್ಲ ಮತ್ತು ನಾಲ್ವರು ಬಂಧನದಲ್ಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.