ನವದೆಹಲಿ: ರಾಜಸ್ಥಾನದ ಪ್ರತಾಪ್ಗಢ ಜಿಲ್ಲೆಯಲ್ಲಿ ಬುಡಕಟ್ಟು ಮಹಿಳೆಯನ್ನು ಆಕೆಯ ಪತಿ ಅತ್ತೆಯೊಂದಿಗೆ ಸೇರಿ ಥಳಿಸಿ ಬೆತ್ತಲೆಯಾಗಿ ಮೆರವಣಿಗೆ ಮಾಡಿದ ವಿಡಿಯೋ ವೈರಲ್ ಆಗಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಘಟನೆಯನ್ನು ಖಂಡಿಸಿದ್ದಾರೆ.
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ನಡ್ಡಾ, ರಾಜಸ್ಥಾನದಲ್ಲಿ ಆಡಳಿತವು ಸಂಪೂರ್ಣವಾಗಿ ವಿಫಲವಾಗಿದೆ, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಇತರ ಸಚಿವರು ಬಣ ಜಗಳಗಳನ್ನು ಪರಿಹರಿಸುವಲ್ಲಿ ನಿರತರಾಗಿದ್ದಾರೆ ಎಂದು ಆರೋಪಿಸಿದ್ದಾರೆ.
“ರಾಜಸ್ಥಾನದ ಪ್ರತಾಪ್ಗಢದ ವಿಡಿಯೋ ಆಘಾತಕಾರಿಯಾಗಿದೆ. ರಾಜಸ್ಥಾನದಲ್ಲಿ ಆಡಳಿತವು ಸಂಪೂರ್ಣವಾಗಿ ಆಬ್ಸೆಂಟ್ ಆಗಿದೆ. ಸಿಎಂ ಮತ್ತು ಮಂತ್ರಿಗಳು ಬಣ ಜಗಳಗಳನ್ನು ಪರಿಹರಿಸುವಲ್ಲಿ ನಿರತರಾಗಿದ್ದಾರೆ ಮತ್ತು ಉಳಿದ ಸಮಯವನ್ನು ದೆಹಲಿಯಲ್ಲಿ ಒಂದು ರಾಜವಂಶವನ್ನು ಸಮಾಧಾನಪಡಿಸಲು ವ್ಯಯಿಸುತ್ತಿದ್ದಾರೆ”ಎಂದು ಜೆಪಿ ನಡ್ಡಾ ಟ್ವಿಟ್ ಮಾಡಿದ್ದಾರೆ
ರಾಜಸ್ಥಾನದಲ್ಲಿ ಮಹಿಳೆಯರ ಸುರಕ್ಷತೆಯ ವಿಷಯವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಕಳೆದ ಕೆಲವು ತಿಂಗಳುಗಳಲ್ಲಿ, ಕರೌಲಿ ಮೈನರ್ ಅತ್ಯಾಚಾರ ಪ್ರಕರಣ ಸೇರಿದಂತೆ ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಕ್ರೂರ ಅಪರಾಧಗಳ ಸರಣಿಯನ್ನು ರಾಜಸ್ಥಾನ ಕಂಡಿದೆ ಎಂದಿದ್ದಾರೆ.
“ರಾಜ್ಯದಲ್ಲಿ ಪ್ರತಿ ದಿನವೂ ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ನಡೆಯುತ್ತಿವೆ. ರಾಜಸ್ಥಾನದ ಜನತೆ ರಾಜ್ಯ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ” ಎಂದು ನಡ್ಡಾ ಬರೆದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.