ನವದೆಹಲಿ: ಇಂದು ದೇಶದ ಆರು ರಾಜ್ಯಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ಇದು ಬಿಜೆಪಿ ನೇತೃತ್ವದ ಎನ್ಡಿಎ ವಿರುದ್ಧ ಪ್ರತಿಪಕ್ಷಗಳ ಇಂಡಿ ಅಲಯನ್ಸ್ಗೆ ಎದುರಾದ ಮೊದಲ ಪರೀಕ್ಷೆಯಾಗಿದೆ. ಈ ವರ್ಷದ ಕೊನೆಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಳು ಮತ್ತು 2024 ರಲ್ಲಿ ಲೋಕಸಭೆ ಚುನಾವಣೆಗಳು ಇರುವ ಹಿನ್ನೆಲೆಯಲ್ಲಿ ಈ ಉಪ ಚುನಾವಣೆ ದಿಕ್ಸೂಚಿಯಾಗಬಲ್ಲದು ಎಂದು ವಿಶ್ಲೇಷಿಸಲಾಗಿದೆ.
ಉತ್ತರ ಪ್ರದೇಶದ ಘೋಸಿ, ಪಶ್ಚಿಮ ಬಂಗಾಳದ ಧೂಪಗುರಿ, ಕೇರಳದ ಪುತ್ತುಪ್ಪಲ್ಲಿ, ಉತ್ತರಾಖಂಡದ ಬಾಗೇಶ್ವರ್, ಜಾರ್ಖಂಡ್ನ ಡುಮ್ರಿ ಮತ್ತು ತ್ರಿಪುರಾದ ಬೊಕ್ಸಾನಗರ ಮತ್ತು ಧನ್ಪುರ ಹೀಗೆ ಆರು ರಾಜ್ಯಗಳ ಏಳು ಸ್ಥಾನಗಳಿಗೆ ಉಪಚುನಾವಣೆ ಇಂದು ನಡೆಯಲಿದೆ.
ಇಂದು ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು, ಸಂಜೆ 6 ರವರೆಗೆ ಮುಂದುವರೆಯಲಿದೆ.
ಎಲ್ಲಾ ಏಳು ಸ್ಥಾನಗಳ ಎಣಿಕೆ ಸೆಪ್ಟೆಂಬರ್ 8 ರಂದು ನಡೆಯಲಿದೆ. ಹಾಲಿ ಶಾಸಕರ ಸಾವಿನಿಂದಾಗಿ ಧುಪ್ಗುರಿ, ಪುತ್ತುಪ್ಪಲ್ಲಿ, ಬಾಗೇಶ್ವರ್, ಡುಮ್ರಿ ಮತ್ತು ಬೊಕ್ಸಾನಗರದಲ್ಲಿ ಉಪಚುನಾವಣೆ ನಡೆಯುತ್ತಿದೆ, ಘೋಸಿ ಮತ್ತು ಧನಪುರದ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಅಲ್ಲಿ ಉಪ ಚುನಾವಣೆ ನಡೆಯುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.