ನವದೆಹಲಿ: ದೇಶದಾದ್ಯಂತ ಪ್ರಸಿದ್ಧ ದೇವಾಲಯಗಳ ಇತಿಹಾಸವನ್ನು ಪ್ರದರ್ಶಿಸುವ ವಸ್ತುಸಂಗ್ರಹಾಲಯವನ್ನು ಅಯೋಧ್ಯೆಯಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿದ್ದು, ಇದಕ್ಕೆ ಸಂಬಂಧಿಸಿದ ಪ್ರಸ್ತುತಿಯನ್ನು ಪ್ರಧಾನಿ ನರೇಂದ್ರ ಮೋದಿಯವರ ಮುಂದೆ ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
ಮಂಗಳವಾರ ದೆಹಲಿಯಲ್ಲಿ ಪ್ರಧಾನ ಮಂತ್ರಿಯವರೊಂದಿಗೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಅಯೋಧ್ಯೆ ನಗರದಲ್ಲಿನ ವಸ್ತುಸಂಗ್ರಹಾಲಯದ ಅಭಿವೃದ್ಧಿಯು ಪ್ರಮುಖ ವಿಷಯವಾಗಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಅಯೋಧ್ಯೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ನಿತೀಶ್ ಕುಮಾರ್ ತಿಳಿಸಿದ್ದಾರೆ.
”ದೇಗುಲದ ವಸ್ತುಸಂಗ್ರಹಾಲಯದ ಕಲ್ಪನೆಯನ್ನು ಪ್ರಧಾನಿಯವರು ತುಂಬಾ ಇಷ್ಟಪಟ್ಟಿದ್ದಾರೆ ಮತ್ತು ಅದನ್ನು ವಿವರವಾಗಿ ಚರ್ಚಿಸಲಾಗಿದೆ” ಎಂದು ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿ ತಿಳಿಸಿದ್ದಾರೆ.
ಯೋಜನೆಗಾಗಿ ಸರಯು ನದಿಯ ಉದ್ದಕ್ಕೂ ಕೆಲವು ಜಾಗಗಳನ್ನು ಗುರುತಿಸಲಾಗಿದ್ದು, ಶೀಘ್ರದಲ್ಲೇ ವಸ್ತುಸಂಗ್ರಹಾಲಯ ನಿರ್ಮಾಣಕ್ಕೆ ಒಂದು ಜಾಗವನ್ನು ಅಂತಿಮಗೊಳಿಸಲಾಗುವುದು ಎಂದು ಅವರು ಹೇಳಿದರು.
ಈ ಹಿಂದೆ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಪ್ರಸ್ತುತಿಯ ಪ್ರಕಾರ 10 ಎಕರೆ ಜಾಗದಲ್ಲಿ ವಸ್ತುಸಂಗ್ರಹಾಲಯವನ್ನು ನಿರ್ಮಿಸಲಾಗುತ್ತದೆ.
”ಈ ಯೋಜನೆಗಾಗಿ ನಾವು ವಿವರವಾದ ನೀಲನಕ್ಷೆಯನ್ನು ಸಿದ್ಧಪಡಿಸುತ್ತಿದ್ದೇವೆ, ಅಲ್ಲಿ ಭಕ್ತರು ಭಾರತದ ವಿವಿಧ ಸ್ಥಳಗಳಲ್ಲಿನ ವೈಭವಯುತ ಹಿಂದೂ ದೇವಾಲಯಗಳನ್ನು ಕಣ್ತುಂಬಿಕೊಳ್ಳಬಹುದು” ಎಂದು ಅಧಿಕಾರಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.