ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಡಿಜಿಟಲ್ ಪರಿವರ್ತನೆ, ವ್ಯಾಪಾರ ಮತ್ತು ಆರ್ಥಿಕ ತೊಡಗಿಸಿಕೊಳ್ಳುವಿಕೆಯಂತಹ ಕ್ಷೇತ್ರಗಳಲ್ಲಿ ಭಾರತ-ಆಸಿಯಾನ್ ಸಹಕಾರವನ್ನು ಬಲಪಡಿಸುವ 12 ಅಂಶಗಳ ಪ್ರಸ್ತಾವನೆಯನ್ನು ಮಂಡಿಸಿದರು.
ಇಂಡೋನೇಷ್ಯಾ ರಾಜಧಾನಿ ಜಕಾರ್ತಾದಲ್ಲಿ ನಡೆದ 20ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು. ಆಸಿಯಾನ್ನ ಪ್ರಧಾನ ಕಾರ್ಯದರ್ಶಿ(ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟ) ಡಾ ಕಾವೊ ಕಿಮ್ ಹರ್ನ್ ಕೂಡ ಶೃಂಗಸಭೆಯಲ್ಲಿ ಭಾಗವಹಿಸಿದ್ದರು. ಶೃಂಗಸಭೆಯಲ್ಲಿ ಎರಡು ಜಂಟಿ ಹೇಳಿಕೆಗಳು – ಒಂದು ಕಡಲ ಸಹಕಾರ ಮತ್ತು ಇನ್ನೊಂದು ಆಹಾರ ಭದ್ರತೆಯ ಬಗ್ಗೆ ನಿರ್ಣಯ ಅಂಗೀಕರಿಸಲಾಯಿತು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ(MEA) ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಧಾನಿ ಮೋದಿ ಅವರು ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಏಷ್ಯಾದ ಪ್ರಾಮುಖ್ಯತೆಯನ್ನು ಪುನರುಚ್ಚರಿಸಿದರು ಮತ್ತು ಏಷ್ಯಾ-ಭಾರತ ಮುಕ್ತ ವ್ಯಾಪಾರ ಒಪ್ಪಂದದ(ಎಐಟಿಜಿಎ) ಪರಿಶೀಲನೆಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವ ಅಗತ್ಯವನ್ನು ಒತ್ತಿ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.