ನವದೆಹಲಿ: ಜಿ20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾರತ-ಮಧ್ಯಪ್ರಾಚ್ಯ-ಯುರೋಪ್ ಎಕನಾಮಿಕ್ ಕಾರಿಡಾರ್ ನ ಯೋಜನೆಗಳ ಕುರಿತ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಶಿಪ್ಪಿಂಗ್ ಮತ್ತು ರೈಲ್ವೇ ಸಂಪರ್ಕ ಸೇರಿದಂತೆ ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್ ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದಿದ್ದಾರೆ.
ಮೊದಲ ರೀತಿಯ ಆರ್ಥಿಕ ಕಾರಿಡಾರ್ ಭಾರತ, ಯುಎಇ, ಸೌದಿ ಅರೇಬಿಯಾ, ಇಯು, ಫ್ರಾನ್ಸ್, ಇಟಲಿ, ಜರ್ಮನಿ, ಯುಎಸ್ ಅನ್ನುಒಳಗೊಂಡಿರುವ ಸಂಪರ್ಕ ಮತ್ತು ಮೂಲಸೌಕರ್ಯಗಳ ಸಹಕಾರದ ಐತಿಹಾಸಿಕ ಉಪಕ್ರಮವಾಗಿದೆ. ಇದು ಮುಂಬರುವ ದಿನಗಳಲ್ಲಿ ಭಾರತ, ಮಧ್ಯಪ್ರಾಚ್ಯ ಮತ್ತು ಯುರೋಪ್ನ ಆರ್ಥಿಕ ಏಕೀಕರಣಕ್ಕೆ ಪರಿಣಾಮಕಾರಿ ಮಾಧ್ಯಮವಾಗಲಿದೆ ಎಂದರು.
“ಇದು ಇಡೀ ಪ್ರಪಂಚದ ಸಂಪರ್ಕ ಮತ್ತು ಸುಸ್ಥಿರ ಅಭಿವೃದ್ಧಿಗೆ ಹೊಸ ದಿಕ್ಕನ್ನು ನೀಡುತ್ತದೆ” ಎಂದು ಹೇಳಿದರು. ಬಲವಾದ ಸಂಪರ್ಕ ಮತ್ತು ಮೂಲಸೌಕರ್ಯವು ಮಾನವೀಯತೆಗೆ ಮೂಲಭೂತ ಆಧಾರವಾಗಿದೆ ಮತ್ತು ಭಾರತವು ಯಾವಾಗಲೂ ಇದಕ್ಕೆ ಬಲವಾದ ಒತ್ತು ನೀಡಿದೆ ಎಂದರು. ಭಾರತವು ಸಂಪರ್ಕವನ್ನು ಪ್ರಾದೇಶಿಕ ಗಡಿಗಳಿಗೆ ಸೀಮಿತಗೊಳಿಸುವುದಿಲ್ಲ ಮತ್ತು ಪರಸ್ಪರ ನಂಬಿಕೆಯನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ನಂಬುತ್ತದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.