ನವದೆಹಲಿ: ʼಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು’ ಎಂದು ಹೇಳಿದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರಿಗೆ ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಅವರು ಮತ್ತೊಮ್ಮೆ ತಿರುಗೇಟು ನೀಡಿದ್ದಾರೆ. ‘ಹೆಮ್ಮೆಯ ಹಿಂದೂ’ ಎಂದು ತನ್ನನ್ನು ತಾನು ಕರೆದುಕೊಳ್ಳುವ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರ ಫೋಟೋ ಪೋಸ್ಟ್ ಮಾಡಿರುವ ಅವರು ʼಸನಾತನ ಎಂದರೆ ಇದುʼ ಎಂದಿದ್ದಾರೆ.
ವೈರಲ್ ಫೋಟೋದಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರೊಂದಿಗೆ ಮಾತನಾಡುವಾಗ ಯುಕೆ ಪ್ರಧಾನಿ ನೆಲಕ್ಕೆ ಮೊಣಕಾಲನ್ನು ಊರಿ ಮಾತನಾಡುತ್ತಿರುವುದನ್ನು ಕಾಣಬಹುದು. ಭಾನುವಾರ G20 ಶೃಂಗಸಭೆಗಾಗಿ ಸುನಕ್ ಮತ್ತು ಹಸೀನಾ ಇಬ್ಬರೂ ನವದೆಹಲಿಯಲ್ಲಿದ್ದರು, ಇಬ್ಬರೂ ನಾಯಕರು ಗಂಭೀರ ಸಂಭಾಷಣೆಯಲ್ಲಿ ತೊಡಗಿರುವ ಸಾಮಾನ್ಯ ಚಿತ್ರವು ಸಾಮಾಜಿಕ ಮಾಧ್ಯಮದ ಗಮನವನ್ನು ಸೆಳೆದಿದೆ. ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಹೊಗಳಿಕೆಗಳ ಸುರಿಮಳೆಗೈಯಲಾಗುತ್ದುತಿದೆ. ‘ಸುನಕ್ ಅವರ ನಮ್ರತೆ’ ಎಂದು ಶೀರ್ಷಿಕೆ ನೀಡಿ ಹಂಚಿಕೊಳ್ಳುತ್ತಿದ್ದಾರೆ.
ಶುಕ್ರವಾರ ಭಾರತಕ್ಕೆ ಆಗಮಿಸಿದ ಯುಕೆ ಪ್ರಧಾನಿ ಅವರು ಹಿಂದೂ ಹಬ್ಬ ರಕ್ಷಾ ಬಂಧನವನ್ನು ಆಚರಿಸಿದೆ ಆದರೆ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲು ಅವಕಾಶ ಸಿಗಲಿಲ್ಲ ಎಂದಿದ್ದಾರೆ. “ನಾನು ಹೆಮ್ಮೆಯ ಹಿಂದೂ ಮತ್ತು ನಾನು ಬೆಳೆದದ್ದು ಹೀಗೆನೇ. ನಾನು ಮುಂದಿನ ಒಂದೆರಡು ದಿನಗಳಲ್ಲಿ ಇಲ್ಲಿರುವಾಗ ಮಂದಿರಕ್ಕೆ ಭೇಟಿ ನೀಡಬಹುದು ಎಂಬ ಬಗ್ಗೆ ಆಶಾವಾದಿಯಾಗಿದ್ದೇನೆ” ಎಂದಿದ್ದಾರೆ.
यही “सनातन” है. @Udhaystalin pic.twitter.com/XtKzISY01P
— Acharya Pramod (@AcharyaPramodk) September 11, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.