ನವದೆಹಲಿ: ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ವಿರುದ್ಧದ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಇಂದು ಕೊಯಮತ್ತೂರು, ಕರೂರ್ ಮತ್ತು ತಿರುಚ್ಚಿಯಲ್ಲಿ ಸಚಿವರ ಆಪ್ತರ ನಿವಾಸಗಳು ಮತ್ತು ಕಚೇರಿ ಆವರಣಗಳು ಸೇರಿದಂತೆ 10 ಸ್ಥಳಗಳ ಮೇಲೆ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದೆ.
ಜೂನ್ 14 ರಂದು ಬಾಲಾಜಿ ಅವರ ಅಧಿಕೃತ ನಿವಾಸ ಮತ್ತು ಸಚಿವಾಲಯದ ಕಚೇರಿ ಮೇಲೆ ಇಡಿ ದಾಳಿ ನಡೆಸಿತ್ತು, ಇದರ ನಂತರ ಇಡಿ ಬಾಲಾಜಿ ಅವರನ್ನು ಬಂಧಿಸಿತು. ಅವರು ಪ್ರಸ್ತುತ ಪುಝಲ್ ಕೇಂದ್ರ ಕಾರಾಗೃಹದಲ್ಲಿದ್ದಾರೆ.
ಹಿಂದಿನ ಎಐಎಡಿಎಂಕೆ ಸರ್ಕಾರದ ಅವಧಿಯಲ್ಲಿ ರಾಜ್ಯ ಸಾರಿಗೆ ಸಚಿವರಾಗಿದ್ದಾಗ ಬಾಲಾಜಿ ಅವರ ಮೇಲೆ ಉದ್ಯೋಗಕ್ಕಾಗಿ ನಗದು ಹಗರಣದ ಆರೋಪವಿದೆ. ಹೀಗಾಗಿ ಪ್ರಸ್ತುತ ಡಿಎಂಕೆ ಸಚಿವರಾಗಿರುವ ಬಾಲಾಜಿ ಅವರನ್ನು ವಿಚಾರಣೆ ನಡೆಸಿದ ನಂತರ ಇಡಿ ಬಂಧಿಸಿದೆ.
ಡಿಎಂಕೆ ಸಚಿವ ವಿ ಸೆಂಥಿಲ್ ಬಾಲಾಜಿ ಸೆಪ್ಟೆಂಬರ್ನಲ್ಲಿ ಚೆನ್ನೈನ ಸ್ಥಳೀಯ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ಮೇರೆಗೆ ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ಜಾರಿ ಮಾಡಲು ಸೆಷನ್ಸ್ ನ್ಯಾಯಾಲಯ ಸೋಮವಾರ ಆದೇಶಿಸಿದೆ.
ಸಂಸ್ಥೆಯು ನ್ಯಾಯಾಲಯದ ಮುಂದೆ ಸುಮಾರು 3,000 ಪುಟಗಳ ಚಾರ್ಜ್ಶೀಟ್ ಅನ್ನು ಸಲ್ಲಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.