ನವದೆಹಲಿ: G20 ಶೃಂಗಸಭೆಯ ಭಾರೀ ಯಶಸ್ಸಿಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಶ್ಲಾಘಿಸುವ ನಿರ್ಣಯವನ್ನು ಕೇಂದ್ರ ಸಚಿವ ಸಂಪುಟ ಅಂಗೀಕರಿಸಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ಭಾರತದ G20 ಪ್ರೆಸಿಡೆನ್ಸಿಯು ಹಲವಾರು ಸ್ಪಷ್ಟವಾದ ಫಲಿತಾಂಶಗಳನ್ನು ಖಾತ್ರಿಪಡಿಸಿದೆ ಎಂದು ಅವರು ಹೇಳಿದ್ದಾರೆ.
“ಜಿ 20 ಶೃಂಗಸಭೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪ್ರಧಾನಿ ಮೋದಿಯವರನ್ನು ಅಭಿನಂದಿಸುವ ನಿರ್ಣಯವನ್ನು ಮಂಡಿಸಿದರು. ಇಂದು, ಜಾಗತಿಕ ಕಾರ್ಯಸೂಚಿಯಲ್ಲಿ ಭಾರತವು ಪ್ರಮುಖ ಪಾತ್ರವನ್ನು ವಹಿಸುತ್ತದೆ ಮತ್ತು ಇದರ ಕ್ರೆಡಿಟ್ ದೇಶದ ನಾಯಕತ್ವಕ್ಕೆ ಸಲ್ಲುತ್ತದೆ” ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯ ನಂತರ ಠಾಕೂರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು. “ಈ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು” ಎಂದು ಠಾಕೂರ್ ತಿಳಿಸಿದರು.
ಜಿ 20 ಶೃಂಗಸಭೆಯ ಯಶಸ್ವಿ ಆತಿಥ್ಯವು ಇಡೀ ರಾಷ್ಟ್ರಕ್ಕೆ ಅತ್ಯಂತ ಹೆಮ್ಮೆಯನ್ನು ತಂದಿದೆ ಮತ್ತು ಜಾಗತಿಕ ಜೈವಿಕ ಇಂಧನ ಒಕ್ಕೂಟದ ಸ್ಥಾಪನೆ ಮತ್ತು ಆಫ್ರಿಕನ್ ಯೂನಿಯನ್ ಅನ್ನು ಗುಂಪಿಗೆ ಸೇರಿಸುವುದು ಮುಂತಾದ ಪ್ರಧಾನಿ ಮೋದಿಯವರ ಹಲವಾರು ಉಪಕ್ರಮಗಳಿಗೆ ಸಂಪುಟ ಒಪ್ಪಿಗೆ ನೀಡಿದೆ. ಇದನ್ನು ವಿಶಾಲ ಬೆಂಬಲದೊಂದಿಗೆ ಅಳವಡಿಸಿಕೊಳ್ಳಲಾಗಿದೆ ಎಂದು ಠಾಕೂರ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.