ಚಂಡೀಗಢ: ನುಹ್ ಹಿಂಸಾಚಾರ ಪ್ರಕರಣದ ತನಿಖೆಯ ಮಹತ್ವದ ಬೆಳವಣಿಗೆಯಲ್ಲಿ, ಕಾಂಗ್ರೆಸ್ ಶಾಸಕ ಮಮ್ಮನ್ ಖಾನ್ ಅವರನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಗುರುವಾರ ರಾತ್ರಿ ಬಂಧಿಸಿದೆ. ಮಮ್ಮನ್ ಖಾನ್ ಅವರಿಗೆ ತನಿಖೆಗೆ ಹಾಜರಾಗುವಂತೆ ನುಹ್ ಪೊಲೀಸರು ಎರಡು ಎರಡು ಬಾರಿ ಸಮನ್ಸ್ ನೀಡಿದರೂ ಹಾಜರಾಗದೆ ತಪ್ಪಿಸಿಕೊಂಡಿದ್ದರು, ಈ ಹಿನ್ನೆಲೆಯಲ್ಲಿ ಅವರ ಬಂಧನವಾಗಿದೆ.
ಹರಿಯಾಣದ ಹೆಚ್ಚುವರಿ ಅಡ್ವೊಕೇಟ್ ಜನರಲ್ ದೀಪಕ್ ಸಬರ್ವಾಲ್ ಅವರು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನಲ್ಲಿ ಜುಲೈ 31 ರಂದು ನುಹ್ನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದ ಎಫ್ಐಆರ್ನಲ್ಲಿ ಮಮ್ಮನ್ ಖಾನ್ ಅವರನ್ನು ಆರೋಪಿಯನ್ನಾಗಿ ಹೆಸರಿಸಲಾಗಿದೆ ಎಂದು ಬಹಿರಂಗಪಡಿಸಿದ್ದರು.
ಈ ನಿರ್ಧಾರಕ್ಕೆ ಕಾರಣವಾದ ಫೋನ್ ಕರೆ ದಾಖಲೆಗಳು ಮತ್ತು ಇತರ ಸಾಮಗ್ರಿಗಳು ಸೇರಿದಂತೆ ಸಾಕಷ್ಟು ಪುರಾವೆಗಳಿವೆ ಎಂದು ಸಬರ್ವಾಲ್ ಹೇಳಿದ್ದಾರೆ.
ಮಮ್ಮನ್ ಖಾನ್ ಅವರು ಈ ಹಿಂದೆ ನ್ಯಾಯಾಲಯಕ್ಕೆ ಸಲ್ಲಿಸಿದ ಮನವಿಯಲ್ಲಿ ತಾನು ಜುಲೈ 26 ರಿಂದ ಆಗಸ್ಟ್ 1 ರವರೆಗೆ ತನ್ನ ಗುರುಗ್ರಾಮ್ ನಿವಾಸದಲ್ಲಿದ್ದೆ ಮತ್ತು ಆಪಾದಿತ ಘಟನೆಯ ಸಮಯದಲ್ಲಿ ನುಹ್ನಲ್ಲಿ ಇರಲಿಲ್ಲ ಎಂದು ಪ್ರತಿಪಾದಿಸಿದ್ದರು. ಆದರೆ ಸರ್ಕಾರಿ ವಕೀಲರು ಇದು ಸುಳ್ಳು ಎಂದು ಪ್ರತಿಪಾದಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.