ನವದೆಹಲಿ: ಇಂದು ಹೈದರಾಬಾದ್ ವಿಮೋಚನಾ ದಿನದ ಸಂದರ್ಭದಲ್ಲಿ ಸಿಕಂದರಾಬಾದ್ನ ಪರೇಡ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಷ್ಟ್ರಧ್ವಜಾರೋಹಣ ಮಾಡಿದರು. ಅಲ್ಲದೇ ಅವರು ಸಶಸ್ತ್ರ ಪಡೆಗಳ ಪರೇಡ್ ಅನ್ನು ಪರಿಶೀಲಿಸಿದರು ಮತ್ತು ಗೌರವ ವಂದನೆ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ತೆಲಂಗಾಣ ಜನತೆಯನ್ನುದ್ದೇಶಿಸಿ ಮಾತನಾಡಿದ ಅವರು, ನಿಜಾಮರ ದಬ್ಬಾಳಿಕೆಯ ಆಡಳಿತದ ವಿರುದ್ಧ ಹೋರಾಡಲು ದೇಶದ ಜನರು ಧೈರ್ಯ ತೋರಿಸಿದರು ಮತ್ತು ಅತ್ಯುನ್ನತ ಶ್ರೇಣಿಯ ದೇಶಭಕ್ತಿಯನ್ನು ಪ್ರದರ್ಶಿಸಿದರು. ಆದರೆ ಸರ್ಕಾರಗಳು ಅವರ ತ್ಯಾಗವನ್ನು ನಿರ್ಲಕ್ಷಿಸಿ ಇತಿಹಾಸವನ್ನು ಕತ್ತಲೆಯಲ್ಲಿಟ್ಟಿವೆ ಎಂದು ಹೇಳಿದರು.
ಭವಿಷ್ಯದ ಪೀಳಿಗೆಗೆ ನೆಲದ ಇತಿಹಾಸವನ್ನು ಹತ್ತಿರ ತರಲು ನರೇಂದ್ರ ಮೋದಿ ಸರ್ಕಾರ ನಿರ್ಧರಿಸಿದೆ ಮತ್ತು ಪ್ರತಿ ವರ್ಷ ಅಧಿಕೃತವಾಗಿ ವಿಮೋಚನಾ ದಿನವನ್ನು ಆಚರಿಸಲು ನಿರ್ಧರಿಸಿದೆ ಎಂದು ಅವರು ಹೇಳಿದರು. ಆರ್ಥಿಕ ಮತ್ತು ಹವಾಮಾನ ಬದಲಾವಣೆ ಸಂಬಂಧಿತ ವಿಷಯಗಳ ಕುರಿತು ಭಾರತದ ದೃಷ್ಟಿ ಪ್ರಪಂಚದ ಉಳಿದ ಭಾಗಗಳಿಗೆ ದಾರಿ ತೋರಿಸುತ್ತಿದೆ ಎಂದು ಅವರು ಹೇಳಿದರು.
ಇದಕ್ಕೂ ಮುನ್ನ ಅವರು ಸಿಕಂದರಾಬಾದ್ನ ವೀರುಲ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ, ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ, ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಗೋವಿಂದ್ ಮಾತನಾಡಿದರು. ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ ರಾಜ್ಯಗಳಿಂದ ಆಗಮಿಸಿದ್ದ ಅಪಾರ ಸಂಖ್ಯೆಯ ಸಾಂಸ್ಕೃತಿಕ ತಂಡಗಳು ಈ ಸಂದರ್ಭದಲ್ಲಿ ಜನರನ್ನು ರಂಜಿಸಿದವು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.