ಮೈಸೂರು: ಇಂದು ಮೈಸೂರು ಅರಮನೆ ಆವರಣದಲ್ಲಿ ಗಣೇಶ ಚತುರ್ಥಿಯ ಅಂಗವಾಗಿ ದಸರಾ ಆನೆಗಳಿಗೆ ‘ಗಜಪೂಜೆ’ ನೆರವೇರಿತು. ಗಜಪಡೆಗಳನ್ನು ಅಲಂಕರಿಸಿ ಅವುಗಳಿಗೆ ಬೇಕಾದ ಭಕ್ಷ್ಯಗಳನ್ನು ನೀಡಿ ಗೌರವಿಸಲಾಗಿದೆ.
ಹನಿ ಹನಿ ಮಳೆಯಲ್ಲಿಯೇ ಡಿಸಿಎಫ್ ಗಳಾದ ಸೌರಭ್ ಕುಮಾರ್, ಬಸವರಾಜು ನೇತೃತ್ವದಲ್ಲಿ ಅರಣ್ಯ ಇಲಾಖೆ ಹಾಗೂ ಅರಮನೆ ಮಂಡಳಿ ಅಧಿಕಾರಿಗಳು, ಮಾವುತರು, ಕಾವಾಡಿಗಳು ಹಾಗೂ ಸಿಬ್ಬಂದಿ ಆನೆಗಳಿಗೆ ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಸಿದರು. ಆನೆಗಳ ಹಣೆಗೆ, ಸುಂಡಿಲು, ಪಾದಗಳಿಗೆ ಅರಿಶಿನ ಕುಂಕುಮ ಹಾಗೂ ಗಂಧವನ್ನು ಹಚ್ಚಲಾಯಿತು. ಬಳಿಕ ಸೇವಂತಿಗೆ ಹೂಗಳಿಂದ ಅವುಗಳನ್ನು ಅಲಂಕಾರ ಮಾಡಲಾಯಿತು, ಚಾಮರವನ್ನು ಬೀಸಲಾಯಿತು. ಪಂಚ ಫಲ ತಿನಿಸುಗಳನ್ನು ನೈವೇದ್ಯ ನೀಡಲಾಯಿತು.
ಅರಮನೆ ಅರ್ಚಕ ಪ್ರಹ್ಲಾದ್ ರಾವ್ ಅವರು ಆನೆಗಳಿಗೆ ಪಂಚ ಫಲ, ಕೊಡುಬಳೆ, ಒಬ್ಬಟ್ಟು, ರವೆ, ಉಂಡೆ, ಸಿಹಿಗಡುಬು, ಕರ್ಜಿಕಾಯಿ, ಲಾಡು, ಚಕ್ಕುಲಿ, ನಿಪ್ಪಟ್ಟು, ಹೋಳಿಗೆ, ಬೆಲ್ಲ, ಕಬ್ಬು ಕಲ್ಲು ಸಕ್ಕರೆ, ಮೋದಕ ಮೊದಲಾದ ಗಣೇಶ ದೇವರಿಗೆ ಇಷ್ಟವಾದ ತಿನಿಸುಗಳನ್ನು ನೀಡಿದರು ಎಂದು ವರದಿಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.